'ಸಿದ್ದು ರಾಜೀನಾಮೆ ನೀಡಿ ಗೌರವ ಹೆಚ್ಚಿಸಿಕೊಂಡಿದ್ದಾರೆ'

Published : Dec 12, 2019, 09:10 AM IST
'ಸಿದ್ದು ರಾಜೀನಾಮೆ ನೀಡಿ ಗೌರವ ಹೆಚ್ಚಿಸಿಕೊಂಡಿದ್ದಾರೆ'

ಸಾರಾಂಶ

ಗೌಡ ಮನೆಗೆ ಕೆಪಿಸಿಸಿ ಹುದ್ದೆ ಆಕಾಂಕ್ಷಿ ಕೆ.ಎಚ್‌.ಮುನಿಯಪ್ಪ| ಸಿದ್ದು ರಾಜೀನಾಮೆ ನೀಡಿ ಗೌರವ ಹೆಚ್ಚಿಸಿಕೊಂಡಿದ್ದಾರೆ

ಬೆಂಗಳೂರು[ಡಿ.12]: ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಹುದ್ದೆ ಆಕಾಂಕ್ಷಿ ಕೆ.ಎಚ್‌. ಮುನಿಯಪ್ಪ ಅವರು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು.

ಕೆಪಿಸಿಸಿ ಹುದ್ದೆಗೆ ಲಾಬಿ ನಡೆಸಲು ಮಂಗಳವಾರವಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್‌ ಪ್ರಮುಖರ ಭೇಟಿಗೆ ಯತ್ನಿಸಿದ್ದ ಮುನಿಯಪ್ಪ ಅವರು ಇದು ಸಾಧ್ಯವಾಗದೇ ನಗರಕ್ಕೆ ಹಿಂತಿರುಗಿದ್ದು, ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ಉಭಯ ನಾಯಕರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ.

ದೇವೇಗೌಡರ ಜತೆ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ ಅವರು, ರಾಜಕೀಯದಲ್ಲಿ ಸಾಕಷ್ಟುಅನುಭವ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದರೆ ನಿಭಾಯಿಸುತ್ತೇನೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಜವಾಬ್ದಾರಿ ನೀಡಿದರೆ ನಾನು ನಿಭಾಯಿಸುತ್ತೇನೆ. ಆದರೆ, ಹೈಕಮಾಂಡ್‌ ಯಾವ ನಿರ್ಧಾರ ಕೈಗೊಳ್ಳಲಿದೆಯೋ ಅದಕ್ಕೆ ಬದ್ಧವಾಗಿರುತ್ತೇನೆ. ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಹಣ ಖರ್ಚು ಮಾಡಿ ಗೆಲುವು ಸಾಧಿಸಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ನಾಯಕತ್ವಕ್ಕೆ ರಾಜೀನಾಮೆ ನೀಡಿ ಪಕ್ಷದ ಗೌರವ ಮತ್ತು ವೈಯಕ್ತಿಕ ಗೌರವ ಹೆಚ್ಚಿಸಿಕೊಂಡಿದ್ದಾರೆ. ಜನಾದೇಶಕ್ಕೆ ನಾವು ಬದ್ಧವಾಗಿರಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆ.ಎಸ್. ಈಶ್ವರಪ್ಪ ಬಿಜೆಪಿ ವಾಪಸಾತಿ, ನನ್ನ ಮನಸ್ಸಲ್ಲೂ ಇದೆ ಬಸನಗೌಡ ಯತ್ನಾಳ್ ಮನಸ್ಸಲ್ಲೂ ಇದೆ ಅಂದ್ರು!
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ