ಸೋಲಿಂದ ಧೃತಿಗೆಟ್ಟಿಲ್ಲ, ಮತ್ತೆ ಪುಟಿದೇಳುತ್ತೇವೆ: ರೇವಣ್ಣ

Published : Dec 12, 2019, 08:26 AM IST
ಸೋಲಿಂದ ಧೃತಿಗೆಟ್ಟಿಲ್ಲ, ಮತ್ತೆ ಪುಟಿದೇಳುತ್ತೇವೆ: ರೇವಣ್ಣ

ಸಾರಾಂಶ

ಸೋಲಿಂದ ಧೃತಿಗೆಟ್ಟಿಲ್ಲ, ಮತ್ತೆ ಪುಟಿದೇಳುತ್ತೇವೆ: ರೇವಣ್ಣ| 2023ರಲ್ಲಿ ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ| ರಾಷ್ಟ್ರೀಯ ಪಕ್ಷಗಳನ್ನು ಜನ ದೂರವಿಡುತ್ತಾರೆ

ಹಾಸನ[ಡಿ.12]: ಉಪ ಚುನಾವಣೆ ಫಲಿತಾಂಶದಿಂದ ಜೆಡಿಎಸ್‌ ಮುಗಿದೇ ಹೋಯಿತು ಎಂದು ಬಿಂಬಿಸಲಾಗುತ್ತಿದೆ. ಅದು ಎಂದಿಗೂ ಸಾಧ್ಯವಿಲ್ಲ. ಜೆಡಿಎಸ್‌ ರಾಜಕೀಯ ತಂತ್ರಗಾರಿಕೆ ಈಗ ಆರಂಭವಾಗುತ್ತದೆ. 2023ಕ್ಕೆ ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರ ಹಿಡಿದೆ ಹಿಡಿಯುತ್ತದೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆ ಫಲಿತಾಂಶದಿಂದ ದೃತಿಗೆಡುವ ಪ್ರಶ್ನೆಯೇ ಇಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳನ್ನು ಜನರು ದೂರ ಇರುವ ಕಾಲ ಬಂದೇ ಬರುತ್ತದೆ ಎಂದು ಭವಿಷ್ಯ ನುಡಿದರು.

ಜೆಡಿಎಸ್‌ಗೆ ಮುಖಂಡರ ಕೊರತೆಯಿಲ್ಲ. ಜೆಡಿಎಸ್‌ನಿಂದ ಹೋದ ಹಲವಾರು ಮಂದಿ ಕಾಂಗ್ರೆಸ್‌ ಮತ್ತು ಬಿಜೆಪಿಗಳಲ್ಲಿದ್ದಾರೆ. ಇಂದು ಬಿಜೆಪಿಯಲ್ಲಿ ಇರುವ ಅರ್ಧದಷ್ಟುಮಂದಿ ದೇವೇಗೌಡರ ಕಾರ್ಖಾನೆಯಲ್ಲೇ ಬೆಳೆದವರು ಎಂದು ಅಭಿಪ್ರಾಯಪಟ್ಟರು.

ಬಿಜೆಪಿ 2008ರಲ್ಲಿ ಇದೇ ರೀತಿ ಆಪರೇಷನ್‌ ಕಮಲ ಮಾಡಿದಾಗ 20 ಕ್ಷೇತ್ರಗಳಿಗೆ ಚುನಾವಣೆ ನಡೆದ ಜೆಡಿಎಸ್‌ 6 ಕ್ಷೇತ್ರಗಳಲ್ಲಿ ಗೆದ್ದಿತ್ತು. 2013ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 120 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ 40 ಸ್ಥಾನಗಳನ್ನು ಗೆದ್ದಿತ್ತು. ಶೇಕಡಾವಾರು ಮತಗಳಲ್ಲಿ ಜೆಡಿಎಸ್‌ 2 ಸ್ಥಾನಕ್ಕೆ ಬಂತು. 1989ರಲ್ಲಿ 2 ಸ್ಥಾನಗಳನ್ನು ಪಡೆದಿದ್ದ ಜೆಡಿಎಸ್‌ 1996ರ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂತು. ಹಾಗಾಗಿ ಉಪ ಚುನಾವಣೆ ಫಲಿತಾಂಶವೇ ಅಂತಿಮವಲ್ಲ ಎಂದು ವಿಶ್ಲೇಷಿಸಿದರು.

ಹಣದಿಂದ ಉಪಚುನಾವಣೆ

ರಾಜ್ಯ ಸರ್ಕಾರವನ್ನು ಉಳಿಸುವ ಸಲುವಾಗಿ ಉಪಚುನಾವಣೆಯಲ್ಲಿ ಬಿಜೆಪಿ ಹಣಬಲವನ್ನು ಪ್ರಯೋಗಿಸಿದೆ ಎಂದು ಎಚ್‌.ಡಿ.ರೇವಣ್ಣ ಆರೋಪಿಸಿದ್ದಾರೆ. ಬಿಜೆಪಿ ಮಂತ್ರಿಗಳು, ಸ್ಬಯಂಸೇವಕರು ಹಣ ಹಂಚಿದ್ದಾರೆ. ಕೆ.ಆರ್‌.ಪೇಟೆ ಸೇರಿ ಕೆಲವು ಕಡೆ ಕಾಂಗ್ರೆಸ್‌, ಬಿಜೆಪಿ ಹೊಂದಾಣಿಕೆಯಿಂದ ಜೆಡಿಎಸ್‌ ಹಿನ್ನಡೆಯಾಗಿದೆ. ಇವಿಎಂ ಮತ ಯಂತ್ರದಲ್ಲಿ ದೋಷ ಇರುವುದು ಕಂಡು ಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ