
ಮಂಡ್ಯ (ಮೇ.28): ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ(Siddaramaiah) ಅವರು ರಾಜೀನಾಮೆ ನೀಡುವ ವಿಚಾರವಾಗಲೀ, ನಾಯಕತ್ವ ಬದಲಾವಣೆ ವಿಚಾರವಾಗಲೀ ನನಗೆ ಗೊತ್ತಿಲ್ಲ. ಆದರೆ, ನನಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಎರಡು ಕಣ್ಣಿದ್ದಂತೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ರಾಜ್ಯ ನಾಯಕರೇ. 136 ಜನ ಶಾಸಕರು ಗೆದ್ದಿದ್ದು, ಅದರಲ್ಲಿ ಇವರಿಬ್ಬರ ಕೊಡುಗೆ ಅಪಾರವಾದದು. ಹಾಗಾಗಿ ಇಬ್ಬರೂ ನಾಯಕರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧ ಎಂದರು. ಗುರುವಾರ ಸಿಎಂ ಉಪಾಹಾರ ಸಭೆ ಕರೆದಿದ್ದಾರೆ. ಅಲ್ಲಿ ದೆಹಲಿಯ ವಿಷಯ ಚರ್ಚೆಗೆ ಬರಬಹುದು. ಎಐಸಿಸಿ ನಾಯಕರು ದೆಹಲಿಯಿಂದ ಬರುತ್ತಿದ್ದು, ಅವರು ಬಂದ ಮೇಲೆ ವಿಚಾರ ಗೊತ್ತಾಗಲಿದೆ ಎಂದರು.
.ಸಿದ್ದರಾಮಯ್ಯ ಅವರ ರಾಜೀನಾಮೆ, ನಾಯಕತ್ವ ಬದಲಾವಣೆ ಚರ್ಚೆಯಾಗಿರುವ ಬಗ್ಗೆ ನನಗಂತೂ ಮಾಹಿತಿ ಇಲ್ಲ.
ನನಗೆ ಗೊತ್ತಿರುವಂತೆ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಲು ಹೈಕಮಾಂಡ್ ನಾಯಕರ ಬಳಿ ಹೋಗಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.