‘ಕರ್ನಾಟಕ ಸಿಂಗಂ’, ಮಾಜಿ IPS ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ!

Published : Aug 25, 2020, 09:01 AM ISTUpdated : Aug 25, 2020, 11:18 AM IST
‘ಕರ್ನಾಟಕ ಸಿಂಗಂ’, ಮಾಜಿ IPS ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ!

ಸಾರಾಂಶ

ರಾಜಕೀಯಕ್ಕೆ ‘ಕರ್ನಾಟಕ ಸಿಂಗಂ’ ಎಂಟ್ರಿ..!| ಮಾಜಿ IPS ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ| ಬಿಜೆಪಿ ಅಧ್ಯಕ್ಷ ನಡ್ಡಾ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ| ಸುವರ್ಣ ನ್ಯೂಸ್ ಗೆ ಅಣ್ಣಾಮಲೈ ಸ್ಪಷ್ಟನೆ

ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ನೀಡುವುದಾಗಿ ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಆದರೀಗ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಅಧ್ಯಕ್ಷ ನಡ್ಡಾ ಸಮ್ಮುಖದಲ್ಲಿ ಅಣ್ಣಾಮಲೈ ಪಕ್ಷ ಸೇರಲಿದ್ದಾರೆ.

ರಾಜಕೀಯಕ್ಕೆ ‘ಕರ್ನಾಟಕ ಸಿಂಗಂ‘ ಅಣ್ಣಾಮಲೈ ಪ್ರವೇಶ!

ಈ ಸಂಬಂಧ ಸುವರ್ಣ ನ್ಯೂಸ್ಸ್‌ಗೆ ಸ್ಪಷ್ಟನೆ ನೀಡಿರುವ ಅಣ್ಣಾಮಲೈ ಬಿಜೆಪಿ ರಾಷ್ಟ್ರೀಯವಾದಿ ಪಕ್ಷ, ನಾನೂ ರಾಷ್ಟ್ರೀಯವಾದಿ. ಬಿಜೆಪಿ ತಮಿಳುನಾಡು ರಾಜಕೀಯಕ್ಕೆ ಹೊಸ ದಿಕ್ಕು ನೀಡಲಿದೆ ಎಂದಿದ್ದಾರೆ. 2021ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅಣ್ಣಾಮಲೈ ಸ್ಪರ್ಧಿಸಲಿದ್ದು, ಈಗಾಗಲೇ ಚುನಾವಣಾ ಸಿದ್ಧತೆಯನ್ನೂ ಆರಂಭಿಸಿದ್ದಾರೆ. ಅಲ್ಲದೇ ಈಗಾಗಲೇ ದೆಹಲಿ ತಲುಪಿದ್ದಾರೆ.

ಸಚಿವ ಡಾ. ಕೆ. ಸುಧಾಕರ್ ಕೂಡಾ ಈ ಸಂಬಂಧ ಟ್ವೀಟ್ ಮಾಡಿದ್ದು, ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ ಎಂದಿದ್ದಾರೆ.

"

ಕರ್ನಾಟಕದಲ್ಲಿ ಯಾಕೆ ಚುನಾವಣೆಗೆ ನಿಲ್ತಿಲ್ಲ ಅಣ್ಣಾಮಲೈ?

ಅಣ್ಣಾಮಲೈ ಮೂಲತಃ ತಮಿಳುನಾಡಿನ ಕರೂರು ಜಿಲ್ಲೆಯವರು. 2011ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಅವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿದ್ದರು. ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಅವರು 2019 ಮೇ 28ರಂದು ಐಪಿಎಸ್​ ಹುದ್ದೆಗೆ ರಾಜೀನಾಮೆ ನೀಡಿದ್ದರು. ಉಡುಪಿ-ಚಿಕ್ಕಮಗಳೂರು ಎಸ್​ಪಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಬಳಿಕ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದರು. ತಮ್ಮ ಸೇವಾ ಅವಧಿಯಲ್ಲಿ ಅಪರಾಧಿಗಳಲ್ಲಿ ನಡುಕ ಹುಟ್ಟಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!