
ಬೆಂಗಳೂರು, (ಫೆ.13): ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಮತ್ತೇ ಗೊಂದಲಕ್ಕೆ ಕಾರಣಗಿದೆ. ಅಪಮೌಲ್ಯಗೊಂಡ ಸುಮಾರು 48 ಸಾವಿರ ಮತಗಳ ಸಂಬಂಧ ಮರು ಎಣಿಕೆ ಕೈಗೊಳ್ಳಲು ಹೈಕಮಾಂಡ್ ಸೂಚಿಸಿದೆ.
ಈ ಪ್ರಕ್ರಿಯೆ ಫೆಬ್ರವರಿ 20, 21ರಂದು ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆಗಳಿವೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅತ್ಯಧಿಕ ಮತ ಗಳಿಸಿದ್ದ ಮೊಹಮ್ಮದ್ ನಲಪಾಡ್ ಅನರ್ಹಗೊಂಡಿದ್ದರು.
ಕಾಂಗ್ರೆಸ್ ಗೊಂದಲ ದಿಲ್ಲಿಗೆ ಶಿಫ್ಟ್
ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಈ ವಿಚಾರದಲ್ಲೂ ಹಗ್ಗಜಗ್ಗಾಟ ಮುಂದುವರಿದಿದೆ. ಎರಡೂ ಬಣದವರು ದಿಲ್ಲಿಗೆ ದೂರು ಕೊಂಡೊಯ್ದಿದ್ದಾರೆ.
ಇದರ ಮಧ್ಯೆ ಅಪಮೌಲ್ಯಗೊಂಡ ಮತಗಳ ಬಗ್ಗೆ ಮರು ಎಣಿಕೆಗೆ ಒತ್ತಡ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಕೈಗೊಳ್ಳುವಂತೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ. ಇದರಿಂದ ಮುಂದೆ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.