ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿವಾದ ಕೊನೆಗೂ ಸುಖಾಂತ್ಯ

Published : Jun 29, 2021, 10:36 PM IST
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿವಾದ ಕೊನೆಗೂ ಸುಖಾಂತ್ಯ

ಸಾರಾಂಶ

* ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಿವಾದ ಸುಖಾಂತ್ಯ * ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಗೊಂದಲ ಬಗೆಹರಿಸಿದ ಡಿಕೆಶಿ * ಸಂಧಾನದ ಮೂಲಕ ಇಬ್ಬರಿಗೂ ಅಧಿಕಾರ ಹಂಚಿಕೆ

ಬೆಂಗಳೂರು, (ಜೂನ್.29): ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಗೊಂದಲ ಕೊನೆಗೂ ಬಗೆಹರಿದಿದೆ. ಸಂಧಾನ ಸೂತ್ರದ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಿವಾದ ಸುಖಾಂತ್ಯಗೊಳಿಸಿದ್ದಾರೆ.

ರಕ್ಷಾ ರಾಮಯ್ಯ ಹಾಗೂ ಮೊಹ್ಮದ್ ನಲಪಾಡ್ ನಡುವಿನ ಫೈಟ್‌ ಅನ್ನು ಡಿಕೆ ಶಿವಕುಮಾರ್ ಸಂಧಾನ ಮಾಡಿದ್ದು, ಇಬ್ಬರಿಗೂ ಅಧಿಕಾರ ಹಂಚಿಕೆ ಮಾಡಿದ್ದಾರೆ.

 ಡಿಸೆಂಬರ್ ವರೆಗೂ ಅಂದ್ರೆ 6 ತಿಂಗಳು ವರೆಗೆ ರಕ್ಷಾ ರಾಮಯ್ಯ ಅಧ್ಯಕ್ಷ. ಬಳಿಕ ಮುಂದಿನ ಜನವರಿ ವರೆಗೆ ತನಕ ಮೊಹಮ್ಮದ್ ನಲಪಾಡ್ ಅಧ್ಯಕ್ಷ ಎನ್ನುವ ಸಂಧಾನ ಮಾಡಲಾಗಿದೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಯುವ ಘಟಕಕ್ಕೆ 6 ತಿಂಗಳ ಹಿಂದೆ ಚುನಾವಣೆಗಳು ನಡೆದು ಮಹಮ್ಮದ್ ನಲಪಾಡ್  ಆಯ್ಕೆಗೊಂಡಿದ್ದರು.  ಯುವ ಅಧಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ನಲಪಾಡ್, 64,203 ಮತ  ಮತಗಳನ್ನ ಪಡೆದುಕೊಂಡಿದ್ದರು. ಇನ್ನು ಮತ್ತೊಂದು ಕಡೆ ರಕ್ಷ ರಾಮಯ್ಯ ಅವರು ಎರಡನೆಯ ಸ್ಥಾನದಲ್ಲಿದ್ದು 57,271 ಸಾವಿರ ಮತ ಪಡೆದಿದ್ದರು. ಆದ್ರೆ,  ಆಯ್ಕೆ ಬಳಿಕ ಅನೂರ್ಜಿತಗೊಂಡಿದ್ದರು.

ಇದೀಗ ಮುಂದಿನ ಸಿಎಂ ವಿವಾದದ ಮಧ್ಯೆ ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕಾಗಿ ಮೊಹಮ್ಮದ್ ನಲಪಾಡ್ ಮತ್ತು ರಕ್ಷಾ ರಾಮಯ್ಯ ನಡುವಿನ ಫೈಟ್ ಅಂತ್ಯಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ