RSS, BJP ಮೇಲೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಕೆಂಡ

Published : Mar 26, 2024, 08:57 AM ISTUpdated : Mar 26, 2024, 09:09 AM IST
RSS, BJP ಮೇಲೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಕೆಂಡ

ಸಾರಾಂಶ

ಮುಸ್ಲಿಂ ವ್ಯಕ್ತಿಗಳು ಸೃಷ್ಟಿಸಿದ ಭಾರತ್‌ ಮಾತಾ ಕಿ ಜೈ ಹಾಗೂ ಜೈ ಹಿಂದ್‌ ಘೋಷಣೆಗಳನ್ನು ಸಂಘ ಪರಿವಾರದವರು ತ್ಯಜಿಸುತ್ತಾರಾ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪ್ರಶ್ನಿಸಿದ್ದಾರೆ.

ಪಿಟಿಐ ಮಲಪ್ಪುರಂ: ‘ಮುಸ್ಲಿಂ ವ್ಯಕ್ತಿಗಳು ಸೃಷ್ಟಿಸಿದ ಭಾರತ್‌ ಮಾತಾ ಕಿ ಜೈ ಹಾಗೂ ಜೈ ಹಿಂದ್‌ ಘೋಷಣೆಗಳನ್ನು ಸಂಘ ಪರಿವಾರದವರು ತ್ಯಜಿಸುತ್ತಾರಾ’ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರೇ ಹೆಚ್ಚಿರುವ ಮಲಪ್ಪುರಂ ಜಿಲ್ಲೆಯಲ್ಲಿ ಸೋಮವಾರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ವಿಜಯನ್‌, ‘ಅಜೀಮುಲ್ಲಾ ಖಾನ್‌ ಎಂಬುವರು ಭಾರತ್‌ ಮಾತಾ ಕೀ ಜೈ ಘೋಷಣೆ ಸೃಷ್ಟಿಸಿದವರು. ಅಬಿದ್‌ ಹಸನ್‌ ಎಂಬುವರು ಜೈ ಹಿಂದ್‌ ಘೋಷಣೆಯನ್ನು ಮೊದಲ ಬಾರಿ ಕೂಗಿದವರು. ಇದು ಸಂಘ ಪರಿವಾರದವರಿಗೆ ಗೊತ್ತಿದೆಯೋ ಇಲ್ಲವೋ ತಿಳಿಯದು. ಮುಸ್ಲಿಮರನ್ನು ವಿರೋಧಿಸುವ ಅವರಿಗೆ ಈ ವಿಷಯ ತಿಳಿದರೆ ಇವೆರಡೂ ಘೋಷಣೆಗಳನ್ನು ತ್ಯಜಿಸಲು ಸಿದ್ಧರಿದ್ದಾರಾ’ ಎಂದು ಪ್ರಶ್ನಿಸಿದರು.

ಸಿಎಎ ಅನುಷ್ಠಾನಕ್ಕೆ ಪಾಕ್‌ ನಿರಾಶ್ರಿತ ಹಿಂದೂಗಳು ಹರ್ಷ: ಕೇರಳದಲ್ಲಿ ಜಾರಿ ಮಾಡಲ್ಲ ಎಂದ ಸಿಎಂ ಪಿಣರಾಯಿ

ಮುಸ್ಲಿಂ ರಾಜರು ಹಾಗೂ ಸಾಂಸ್ಕೃತಿಕ ನಾಯಕರು ದೇಶದ ಇತಿಹಾಸ ಹಾಗೂ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಅಂತಹ ಮುಸ್ಲಿಮರ ದೇಶಭಕ್ತಿಯನ್ನೇ ಸಂಘ ಪರಿವಾರದವರು ಪ್ರಶ್ನಿಸುತ್ತಾರೆ. 50ಕ್ಕೂ ಹೆಚ್ಚು ಉಪನಿಷತ್ತುಗಳನ್ನು ಸಂಸ್ಕೃತದಿಂದ ಪರ್ಷಿಯನ್‌ ಭಾಷೆಗೆ ಅನುವಾದಿಸಿ ಜಗತ್ತಿನಾದ್ಯಂತ ತಲುಪುವಂತೆ ಮಾಡಿದ್ದು ಮೊಘಲ್‌ ಚಕ್ರವರ್ತಿ ಶಹಜಹಾನ್‌ನ ಪುತ್ರ ದಾರಾ ಶಿಕೋ. ಮುಸ್ಲಿಮರನ್ನು ಭಾರತದಿಂದ ಪಾಕಿಸ್ತಾನಕ್ಕೆ ಗಡೀಪಾರು ಮಾಡಬೇಕು ಎನ್ನುವ ಸಂಘ ಪರಿವಾರದವರಿಗೆ ಇದೆಲ್ಲ ತಿಳಿದಿದೆಯೇ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನಲ್ಲಿ ಯಾರು ಉಳಿಯುತ್ತಾರೆ ಅನ್ನೋ ಭರವಸೆ ನಾಯಕರಿಗಿಲ್ಲ, ಬಿರುಕು ಹೆಚ್ಚಿಸಿದ ಕೇರಳ ಸಿಎಂ ಮಾತು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ