ಕಾಂಗ್ರೆಸ್‌ ಬಿಟ್ಟ ಖುಷ್ಬೂ, ಕರ್ನಾಟಕದ ಮೇಲೂ ಪ್ರಭಾವ ಬೀರುತ್ತಾ?

Published : Oct 13, 2020, 04:19 PM IST
ಕಾಂಗ್ರೆಸ್‌ ಬಿಟ್ಟ ಖುಷ್ಬೂ, ಕರ್ನಾಟಕದ ಮೇಲೂ ಪ್ರಭಾವ ಬೀರುತ್ತಾ?

ಸಾರಾಂಶ

ಖುಷ್ಬೂ ಕೈಗೆ ಗುಡ್‌ಬೈ, ಬಿಜೆಪಿಗೆ ಸೇರ್ಪಡೆ| ಕರ್ನಾಟಕದ ಮೇಲೂ ಪ್ರಭಾವ ಬೀರುತ್ತಾ ಖುಷ್ಬೂ ರಾಜೀನಾಮೆ?| ಆಂತರಿಕ ಕಲಹ, ಅಸಮಾಧಾನದಿಂದ ಪಕ್ಷದಿಂದ ದೂರ ಸರಿಯುತ್ತಿದ್ದಾರಾ ನಿಷ್ಠಾವಂತ ಕಾರ್ಯಕರ್ತರು?

ಬೆಂಗಳೂರು(ಅ.13): ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬೂ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿ ಪಾಳಯ ಸೇರಿಕೊಂಡಿದ್ದಾರೆ. ಇವರ ರಾಜೀನಾಮೆ ಕರ್ನಾಟಕ ಕಾಂಗ್ರೆಸ್‌ ವಲಯದ ಮೇಲೂ ಪ್ರಾವ ಬೀರಬಹುದಾ ಎಂಬ ಪ್ರಶ್ನೆ ಸದ್ಯ ಕೆಪಿಸಿಸಿ ನಾಯಕರನ್ನು ಕಾಡಲಾರಂಭಿಸಿದೆ. ಕೈ ನಾಯಕರ ಈ ಚಿಂತೆಗೆ ಕಾರಣವೂ ಇದೆ.

ಹೌದು ಕೆಲವು ರಾಜಕೀಯ ವಿಶ್ಲೇಷಕರ ಅನ್ವಯ ಮಾಜಿ ಶಾಸಕ ಮತ್ತು ಸಚಿವ ರೋಶನ್ ಬೇಗ್ ಕಾಂಗ್ರೆಸ್‌ ಕಾರ್ಯ ವೈಖರಿಯಿಂದ ಬೇಸತ್ತಿದ್ದರು. ಅಲ್ಲದೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನ ಗೆದ್ದಿದ್ದಕ್ಕಾಗಿ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದರು ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಉಸ್ತುವಾರಿ ಕೆ ಸಿ ವೇಣುಗೋಪಾಲ್ ವಿರುದ್ಧವೂ ಕಿಡಿ ಕಾರಿದ್ದರು. ಈ ಸಂಬಂಧ ಅವರಿಗೆ ಶೋಕಾಸ್ ನೋಟಿಸ್ ಕೂಡ  ನೀಡಲಾಗಿತ್ತು, ಆದರೆ ನೊಟೀಸ್ ಗೆ ಉತ್ತರಿಸಿದ ಕಾರಣ ಅವರನ್ನು ಪಕ್ಷದಿಂದ ಅಮಾನತು ಗೊಳಿಸಲಾಗಿತ್ತು.

ಇನ್ನು ಕೆಲ ನಾಯಕರು, ಪಕ್ಷ ಬಿಟ್ಟ 14 ಮಂದಿ ಅತೃಪ್ತ ಶಾಸಕರಿಂದಾಗಿ ಕರ್ನಾಟಕದಲ್ಲಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರ ಬೀಳಲು ಕಾರಣ ಎಂದರು. ಹೀಗಿರುವಾಗ ಖುಷ್ಬೂರಂತಹ ಶಾಸಕರು ಪಕ್ಷದೊಳಗಿರುವ ಅನುಮಾನ, ಹತಾಶೆ ಮತ್ತು ನಿರುತ್ಸಾಹವೇ ಆ ಅತೃಪ್ತರು ಪಕ್ಷ ಬಿಡಲು ಕಾರಣ ಎಂದು ಹೇಳಿದ್ದರು. ಇಂತಹ ಪರಿಸ್ಥಿತಿಯಲ್ಲಿ ಖುಷ್ಬೂ ಮಾತುಗಳನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ನಾಯಕರೊಬ್ಬರು ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹರಿಸಬೇಕಿದೆ. ಇಲ್ಲವಾದಲ್ಲಿ ಪಕ್ಷದ ಅನೇಕ ನಿಷ್ಠಾವಂತ ಕಾರ್ಯಕರ್ತರು ಹೊರ ನಡೆಯಬಹುದು ಎಂದಿದ್ದರು. ಅಲ್ಲದೇ ಕಳೆದ ವರ್ಷ ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡ ಟಾಮ್ ವಡಕ್ಕನ್ ಕೂಡಾ ಕಾಂಗ್ರೆಸ್‌ನ ಪದಾಧಿಕಾರಿಗಳಿಂದ ಬೇಸತ್ತಿದ್ದರು ಎನ್ನಲಾಗಿದೆ.

ಆದರೆ ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಮಾತ್ರ ಪಕ್ಷದ ಪದಾಧಿಕಾರಿಗಳ ಮೇಲಿನ ಅಸಮಾಧಾನ, ಹೀಗೆ ಪಕ್ಷದಿಂದ ಹೊರ ಹೋಗಲು ಕಾರಣವಲ್ಲ. ಒಂದು ವೇಳೆ ಇಂತಹ ಸಮಸ್ಯೆ ಇದ್ದರೆ ಅವುಗಳನ್ನು ಆಂತರಿಕವಾಗಿ ಚರ್ಚಿಸಿ ಬಗೆಹರಿಸಬೇಕು ಎಂದಿದ್ದಾರೆ. ಅಲ್ಲದೇ ಈ ನಾಯಕರು ಅದ್ಯಾವುದೋ ಒತ್ತಡದಿಂದ ಪಕ್ಷ ಬಿಟ್ಟಂತೆ ಕಾಣುತ್ತದೆ. ಈಗ ಅವರ ಸಿದ್ಧಾಂತ ಎಲ್ಲಿದೆ? ಇದು ಜನರ ನಂಬಿಕೆಗೆ ದ್ರೋಹವಲ್ಲವೇ?' ಎಂದು ಪ್ರಶ್ನಿಸಿದ್ದಾರೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ