9 ವರ್ಷಗಳಿಂದ ಕೊಡಗು ಜಿಲ್ಲೆ ಸಂಪರ್ಕ: ಯದುವೀರ್‌

Published : Mar 16, 2024, 11:30 PM IST
9 ವರ್ಷಗಳಿಂದ ಕೊಡಗು ಜಿಲ್ಲೆ ಸಂಪರ್ಕ: ಯದುವೀರ್‌

ಸಾರಾಂಶ

ನಾಡಿನ ಜನತೆ ಮತದಾರರ ಪ್ರೀತಿ ಒಲವು ವಿಶ್ವಾಸ ನನ್ನ ಮೇಲಿದೆ. ಈ ಬಾರಿ ಬಿಜೆಪಿ ಹೈಕಮಾಂಡ್ ತನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರದಿಂದ ಅವಕಾಶ ಕಲ್ಪಿಸಿದೆ, ಜನರ ಬೆಂಬಲ ದೊರೆಯಲಿದೆ ಎಂದು ಅವರು. ಜಿಲ್ಲೆಯಲ್ಲಿ ನದಿ ಸಂರಕ್ಷಣೆ , ವನ್ಯಜೀವಿ ಮಾನವ ಸಂಘರ್ಷ ಈ ಬಗ್ಗೆ ತಜ್ಞರ ಸಲಹೆಯೊಂದಿಗೆ ಅಭಿಪ್ರಾಯ ಪಡೆದು ಅಗತ್ಯವಿರುವ ಯೋಜನೆ ರೂಪಿಸುವ ಭರವಸೆ ವ್ಯಕ್ತಪಡಿಸಿದ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಕುಶಾಲನಗರ(ಮಾ.16):  ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ಕಾಳಜಿ ಇಟ್ಟುಕೊಂಡು ಹಲವು ಯೋಜನೆ ರೂಪಿಸುವ ಆಶಯ ಇದೆ ಎಂದು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಮಡಿಕೇರಿ ತೆರಳುವ ಮಾರ್ಗದಲ್ಲಿ ಕುಶಾಲನಗರ ಗಡಿಭಾಗದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 9 ವರ್ಷಗಳಿಂದ ತನಗೆ ಕ್ಷೇತ್ರದ, ಅದರಲ್ಲಿಯೂ ಕೊಡಗು ಜಿಲ್ಲೆಯ ಸಂಪರ್ಕ ಇರುವುದಾಗಿ ಹೇಳಿದರು.

ಟೀಕೆ, ಸವಾಲುಗಳನ್ನು ಎದುರಿಸಿಯೇ ರಾಜಕಾರಣ ಮಾಡುವೆ: ಬಿಜೆಪಿ ಅಭ್ಯರ್ಥಿ ಯದುವೀರ್

ನಾಡಿನ ಜನತೆ ಮತದಾರರ ಪ್ರೀತಿ ಒಲವು ವಿಶ್ವಾಸ ನನ್ನ ಮೇಲಿದೆ. ಈ ಬಾರಿ ಬಿಜೆಪಿ ಹೈಕಮಾಂಡ್ ತನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರದಿಂದ ಅವಕಾಶ ಕಲ್ಪಿಸಿದೆ, ಜನರ ಬೆಂಬಲ ದೊರೆಯಲಿದೆ ಎಂದು ಅವರು. ಜಿಲ್ಲೆಯಲ್ಲಿ ನದಿ ಸಂರಕ್ಷಣೆ , ವನ್ಯಜೀವಿ ಮಾನವ ಸಂಘರ್ಷ ಈ ಬಗ್ಗೆ ತಜ್ಞರ ಸಲಹೆಯೊಂದಿಗೆ ಅಭಿಪ್ರಾಯ ಪಡೆದು ಅಗತ್ಯವಿರುವ ಯೋಜನೆ ರೂಪಿಸುವ ಭರವಸೆ ವ್ಯಕ್ತಪಡಿಸಿದರು.

ರಾಜಮನೆತನದಲ್ಲಿ ಹಿರಿಯರ ಆಶೀರ್ವಾದ ಜೊತೆಗೆ ಕೆಲಸ ಮಾಡಿದ ಅನುಭವದೊಂದಿಗೆ, ಇದೀಗ ರಾಜಕೀಯ ಕ್ಷೇತ್ರದಲ್ಲಿ ಜನರ ಸೇವೆ ಮಾಡುವ ಅವಕಾಶ ಲಭಿಸಿದೆ ಎಂದು ಅವರು ಹೇಳಿದರು. ಎರಡೂ ಜಿಲ್ಲೆಗಳಲ್ಲಿ ಪರಿಸರ ಕಾಳಜಿಯೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಕೂಡ ಚಿಂತನೆ ಇರುವುದಾಗಿ ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?