'ಯಾವ ರೇಣುಕಾಚಾರ್ಯ..? ಅದೇ ಆ ನರ್ಸ್ ಕೇಸ್.. ಅವ್ರೇನಾ'..?

Published : Dec 13, 2020, 07:16 PM ISTUpdated : Dec 13, 2020, 07:48 PM IST
'ಯಾವ ರೇಣುಕಾಚಾರ್ಯ..? ಅದೇ ಆ ನರ್ಸ್ ಕೇಸ್.. ಅವ್ರೇನಾ'..?

ಸಾರಾಂಶ

ಮುಖ್ಯಮಂತ್ರಿ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಹೇಳಿಕೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಡಿ.11): ಕೋಡಿಹಳ್ಳಿ ಒಬ್ಬ ನಾಲಾಯಕ್ ಎಂದು ಹೇಳಿಕೆ ಕೊಟ್ಟಿದ್ದ ಬಿಜೆಪಿ ಶಾಸಕರು ಎಂ.ಪಿ ರೇಣುಕಾಚಾರ್ಯ ಅವರುಗೆ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ಕೊಟ್ಟಿದ್ದಾರೆ. 

"

ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ. ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ. ಅವರದ್ದೇನಿದ್ದರೂ ಬೆಂಕಿ ಹಚ್ಚುವ ಕೆಲಸ. ಸಾರಿಗೆ ಸಿಬ್ಬಂದಿಗೂ ಕೋಡಿಹಳ್ಳಿ ಚಂದ್ರಶೇಖರ್‌ಗೂ ಏನು ಸಂಬಂಧ. ಆತ ಒಬ್ಬ ನಾಲಾಯಕ್​ ಎಂದು ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದರು.

ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಇದಕ್ಕೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್, ಯಾವ ರೇಣುಕಾಚಾರ್ಯ? ಅದೇ ಆ ನರ್ಸ್ ಕೇಸ್? ಅವ್ರೇನಾ? ಕಚ್ಚೆ ಸರಿಯಿಲ್ಲ ಬಾಯಿ ಸರಿಯಿಲ್ಲ ಆ ವಯ್ಯನ ಬಗ್ಗೆ ಏನು ಹೇಳೋದು? ಎಂದು ತೀಷ್ಣವಾಗಿ ರೇಣುಕಾಚಾರ್ಯಗೆ ಟಾಂಗ್ ಕೊಟ್ಟರು. 

ಕಳೆದ ಮೂರು ದಿನಗಳಿಂದ ವಿವಿಧ ಬೇಡಿಕೆ ಈಡೇರಿವಂತೆ ರಾಜ್ಯ ಸಾರಿಗೆ ನೌಕರರು ಪ್ರತಿಭಟನೆ ಕೈಗೊಂಡಿದ್ದು, ಬಸ್‌ ಇಲ್ಲದೇ ಪ್ರಯಾಣಿಕರು ಸಾಕಷ್ಟು ಪರದಾಡಿದರು.

ಇನ್ನು ಈ ಪ್ರತಿಭಟನೆಯ ನೇತೃತ್ವವ ವಹಿಸಿಕೊಂಡಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯರುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಹ ಕೋಡಿಹಳ್ಳಿಗೆ ಈ ಸಾರಿಗೆ ನೌಕರರಿಗೆ ಏನ ಸಂಬಂಧ..? ಅವರೊಬ್ಬ ರೋಲ್‌ಕಾಲ್ ಮನುಷ್ಯ, ಹಾಗೇ ಹೀಗೆ ಅಂತೆಲ್ಲಾ ಬೈಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!