ಕಾಂಗ್ರೆಸ್‌ ಸರ್ಕಾರಕ್ಕೆ ಆಯುಷ್ಯ ಇಲ್ಲ, ಜನವರಿಗೆ ಸರ್ಕಾರ ಬೀಳುವುದು ಖಚಿತ: ಸಂಸದ ಮುನಿಸ್ವಾಮಿ

Published : Jul 16, 2023, 10:15 PM IST
ಕಾಂಗ್ರೆಸ್‌ ಸರ್ಕಾರಕ್ಕೆ ಆಯುಷ್ಯ ಇಲ್ಲ, ಜನವರಿಗೆ ಸರ್ಕಾರ ಬೀಳುವುದು ಖಚಿತ: ಸಂಸದ ಮುನಿಸ್ವಾಮಿ

ಸಾರಾಂಶ

ಕಾಂಗ್ರೆಸ್‌ನಲ್ಲಿ ಎರಡು ಮೂರು ಗುಂಪುಗಳಾಗಿವೆ, ಬಿಜೆಪಿ ಕಡೆ ಅವರೆಲ್ಲರು ಎದುರು ನೋಡುತ್ತಿದ್ದಾರೆ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ: ಸಂಸದ ಎಸ್‌.ಮುನಿಸ್ವಾಮಿ 

ಕೋಲಾರ(ಜು.16):  ಕಾಂಗ್ರೆಸ್‌ ಸರ್ಕಾರಕ್ಕೆ ಆಯ್ಯುಷ ಇಲ್ಲ, ಡಿಸೆಂಬರ್‌, ಜನವರಿಗೆ ಸರ್ಕಾರ ಬೀಳುವುದು ಖಚಿತ ಎಂದು ಸಂಸದ ಎಸ್‌.ಮುನಿಸ್ವಾಮಿ ಭವಿಷ್ಯ ನುಡಿದರು. 

ಮಾಲೂರಿನಲ್ಲಿ ತಾಲ್ಲೂಕು ಆಡಳಿತದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಸಮಾವೇಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದೆ ಎಂದೆಗೂ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಕಾಂಗ್ರೆಸ್‌ ಸರ್ಕಾರಕ್ಕೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸಿಗರಿಗೆ ಗೊತ್ತಿದೆ ಎಂದು ಹೇಳಿದರು. 

ಕಾಟಾಚಾರದ ಉಸ್ತುವಾರಿ ಸಚಿವ ನಾನಲ್ಲ: ಭೈರತಿ ಸುರೇಶ್‌

ಕಾಂಗ್ರೆಸ್‌ನಲ್ಲಿ ಎರಡು ಮೂರು ಗುಂಪುಗಳಾಗಿವೆ, ಬಿಜೆಪಿ ಕಡೆ ಅವರೆಲ್ಲರು ಎದುರು ನೋಡುತ್ತಿದ್ದಾರೆ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದರು. 

ಕೇಂದ್ರ ಸರ್ಕಾರ ಜನ ಕೊಟ್ಟಿರುವ ಯೋಜನೆಗಳನ್ನು ನೋಡಿ ಹಲವಾರು ಪಕ್ಷಗಳು ಬೆಂಬಲ ನೀಡುತ್ತಿವೆ, ಕಾನೂನು ಸಿವಿಲ್‌ ಕೋಡ್‌ ಬಗ್ಗೆ ಆಮ್‌ ಆದ್ಮಿ ಪಕ್ಷ ಸಹ ಬೆಂಬಲ ವ್ಯಕ್ತಪಡಿಸಿದೆ ಎಂದರಲ್ಲದೆ, ಮಹಾರಾಷ್ಟ್ರ, ಬಿಹಾರ, ಗೋವಾ ರಾಜ್ಯಗಳಲ್ಲಿ ಸಹ ಅನೇಕ ಪಕ್ಷಗಳು ಎನ್‌ಡಿಎ ಜೊತೆ ಸೇರಿಕೊಂಡಿವೆ. ದೇಶದಲ್ಲಿ ಮತ್ತೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ