ಜೆಡಿಎಸ್‌ ಜೊತೆ ಮೈತ್ರಿಯಾದರೆ ಕೋಲಾರ ಕ್ಷೇತ್ರ ಬಿಟ್ಟು ಕೊಡುವೆ: ಮುನಿಸ್ವಾಮಿ

Published : Sep 09, 2023, 01:30 AM IST
ಜೆಡಿಎಸ್‌ ಜೊತೆ ಮೈತ್ರಿಯಾದರೆ ಕೋಲಾರ ಕ್ಷೇತ್ರ ಬಿಟ್ಟು ಕೊಡುವೆ: ಮುನಿಸ್ವಾಮಿ

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ನಡುವೆ ಮೈತ್ರಿಯಾದರೆ ಒಳ್ಳೆಯದು. ಆದರೆ, ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ. ದೇಶದ ಭವಿಷ್ಯಕ್ಕಾಗಿ ನಾನು ಸಂಸದ ಸ್ಥಾನ ಬಿಟ್ಟು ಕೊಡಲು ಸಿದ್ಧ: ಸಂಸದ ಎಸ್‌.ಮುನಿಸ್ವಾಮಿ 

ಕೋಲಾರ(ಸೆ.09): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಏರ್ಪಟ್ಟರೆ, ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ನಡುವೆ ಮೈತ್ರಿಯಾದರೆ ಒಳ್ಳೆಯದು. ಆದರೆ, ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ. ದೇಶದ ಭವಿಷ್ಯಕ್ಕಾಗಿ ನಾನು ಸಂಸದ ಸ್ಥಾನ ಬಿಟ್ಟು ಕೊಡಲು ಸಿದ್ಧ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಪಕ್ಷ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ನನಗಿದೆ. ನಾನು ಸೀಟು ಬಿಟ್ಟು ಕೊಡುವ ವಿಚಾರಕ್ಕೆ ಹತಾಶನಾಗುವುದಿಲ್ಲ. ಆದರೆ, ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಇದುವರೆಗೂ ಪಕ್ಷದಲ್ಲಿ ಯಾವುದೇ ತೀರ್ಮಾನವಾಗಿಲ್ಲ ಎಂದರು.

ಕೋಲಾರ ಭಾಗದ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ 500 ಕೋಟಿ: ಸಂಸದ ಮುನಿಸ್ವಾಮಿ

ಸೆ.16ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಬಸವರಾಜ ಬೊಮ್ಮಾಯಿಯವರು ಕುರುಡುಮಲೆ ಗಣೇಶನ ದೇವಸ್ಥಾನಕ್ಕೆ ಬರಲಿದ್ದಾರೆ. ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಯಡಿಯೂರಪ್ಪ ಈ ಹಿಂದೆ ಚುನಾವಣಾ ಪ್ರಚಾರ ಪ್ರಾರಂಭಿಸಿದಾಗ ಕುರುಡುಮಲೆ ಗಣಪನಿಗೆ ಪೂಜೆ ಸಲ್ಲಿಸಿ, ಪ್ರಚಾರ ಆರಂಭಿಸಿದ್ದರು. ಕರ್ನಾಟಕದಲ್ಲಿ ಬಿಜೆಪಿ 28 ಸ್ಥಾನ ಗೆಲ್ಲಲಿದೆ. ವಿಧಾನಸಭೆಯ ಸೋಲಿನ ಕಹಿ ಮರೆತು ಕಾಂಗ್ರೆಸ್‌ನ್ನು ಸೋಲಿಸುವ ಕೆಲಸ ಆರಂಭ ಮಾಡುತ್ತೇವೆ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ