ಅರಣ್ಯ ಜಮೀನು ತೆರವು: ಕಾಂಗ್ರೆಸ್ ಸರ್ಕಾರದ ವಿರುದ್ದ ಸಂಸದ ಮುನಿಸ್ವಾಮಿ ಆಕ್ರೋಶ

Published : Sep 10, 2023, 02:12 PM IST
ಅರಣ್ಯ ಜಮೀನು ತೆರವು: ಕಾಂಗ್ರೆಸ್ ಸರ್ಕಾರದ ವಿರುದ್ದ ಸಂಸದ ಮುನಿಸ್ವಾಮಿ ಆಕ್ರೋಶ

ಸಾರಾಂಶ

ರೈತರು ಬೆಳೆದಂತ ತರಕಾರಿ ಬೆಳೆಯನ್ನು ಕೊಯ್ಲು ಮಾಡಲು ಬಿಡದೆ ಅರಣ್ಯ ಇಲಾಖೆ ತೆರವು ಮಾಡುತ್ತಿರುವುದು ಅನ್ಯಾಯ ಅಕ್ರಮ ಎಂದು ಸಂಸದ ಮುನಿಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 

ಶ್ರೀನಿವಾಸಪುರ (ಸೆ.10): ರೈತರು ಬೆಳೆದಂತ ತರಕಾರಿ ಬೆಳೆಯನ್ನು ಕೊಯ್ಲು ಮಾಡಲು ಬಿಡದೆ ಅರಣ್ಯ ಇಲಾಖೆ ತೆರವು ಮಾಡುತ್ತಿರುವುದು ಅನ್ಯಾಯ ಅಕ್ರಮ ಎಂದು ಸಂಸದ ಮುನಿಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸಿರುವ ಪ್ರದೇಶಗಳಿಗೆ ತೆರಳಿ ಅಲ್ಲಿನ ರೈತರನ್ನು ಭೇಟಿ ಮಾಡಿದ ನಂತರ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ವಾಗ್ದಾಳಿ ನಡೆಸಿದ ಅವರು ತೋಟಗಾರಿಕೆ ಬೆಳೆಗಳನ್ನು ನಾಶಮಾಡಿರುವುದಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದರು. ಮುಖ್ಯಮಂತ್ರಿ ಸ್ವತಃ ರೈತನ ಮಗನಾಗಿದ್ದಾರೆ, ಕೃಷಿ ಸಚಿವ ಕೃಷ್ಣ ಬೈರೇಗೌಡ ಜಿಲ್ಲೆಯವರೆ ಆಗಿದ್ದರೂ ಇಲ್ಲಿನ ರೈತಾಪಿ ಜನರ ಸಮಸ್ಯೆ ನೋವು ಆಲಿಸುತ್ತಿಲ್ಲ ಎಂದು ದೂರಿದರು.

ದಾಖಲೆ ಇದ್ದರೂ ಜಮೀನು ತೆರವು: ಸಣ್ಣ-ಪುಟ್ಟ ರೈತರಿಗೆ ಕಂದಾಯ ಇಲಾಖೆಯಿಂದ ಭೂಮಿ ಮಂಜೂರಾಗಿರುವ ಬಗ್ಗೆ ದಾಖಲೆಗಳು ಇವೆ ಅದರ ಆಧಾರದಲ್ಲಿ ರೈತರು ಮಾವು, ತರಕಾರಿ ಬೆಳೆಗಳನ್ನು ಬೆಳೆಯುತ್ತ ಜೀವನ ಮಾಡುತ್ತಿದ್ದಾರೆ, ಅಂತಹವರ ಜಮೀನುಗಳನ್ನು ಬಿಡದ ಅರಣ್ಯ ಇಲಾಖೆ ಅಧಿಕಾರಿಗಳು ತೆರವು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆ ಅರಣ್ಯ ಭೂಮಿ ಅಕ್ರಮವಾಗಿ ಒತ್ತುವರಿಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿ ಎರಡು ವಾರ ಕಳೆದ ನಂತರ ಕೋಲಾರ ಸಂಸದ ಮುನಿಸ್ವಾಮಿ ಧೀಡಿರ್ ಶ್ರೀನಿವಾಸಪುರ ತಾಲೂಕಿನ ಪಾಳ್ಯ, ಚಿರುವನಹಳ್ಳಿ, ಅವಲಕುಪ್ಪ ನಾರಮಾಕಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಬೇಟಿ ನೀಡಿ ಭೂಮಿ ಕಳೆದುಕೊಂಡ ರೈತರಿಗೆ ಸಾಂತ್ವಾನ ಹೇಳಿದರು.

ಸಭಾಧ್ಯಕ್ಷನಾಗಿ ಸ್ಥಾನದ ಘನತೆ ಉಳಿಸುವ ಕೆಲಸ ಮಾಡುವೇ: ಯು.ಟಿ.ಖಾದರ್

ಅರಣ್ಯ ಇಲಾಖೆ ವಿರುದ್ಧ ಹೋರಾಟ: ನಂತರ ದೂರವಾಣಿ ಮೂಲಕ ಜಿಲ್ಲಾ ಅರಣ್ಯಾಧಿಕಾರಿಗೆ ಕರೆ ಮಾಡಿದರಾದರು ಅಧಿಕಾರಿಗಳಿಂದ ಕರೆ ಸ್ವೀಕಾರ ಆಗದ ಹಿನ್ನೆಲೆಯಲ್ಲಿ ರೈತರೊಂದಿಗೆ ಮಾತನಾಡಿದ ಸಂಸದ ಈ ಬಗ್ಗೆ ಮುಂದಿನ ದಿನಗಳಲ್ಲಿ ಶ್ರೀನಿವಾಸಪುರ ಅರಣ್ಯ ಇಲಾಖೆ ವಿರುದ್ಧ ಎಲ್ಲಾ ರೈತರು ಒಗ್ಗಾಟ್ಟಾಗಿ ಹೋರಾಟ ಮಾಡೋಣ ಎಂದರು. ತಾಲೂಕಿನ ನಾರಮಾಕನಹಳ್ಳಿ ಬಳಿ ಸಂಸದ ಮುನಿಸ್ವಾಮಿ ಸ್ಥಳದಲ್ಲಿದ್ದಂತೆ ಜೆಸಿಬಿಗಳ ಮೇಲೆ ರೈತರು ಕಲ್ಲು ತೂರಾಟ ನಡೆಸಿದಾಗ ೫ ಜೆಸಿಬಿಗಳ ಗಾಜು ಪುಡಿಪುಡಿಯಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು, ತಕ್ಷಣ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಆಗಮಿಸಿ ವಾತಾವರಣ ತಿಳಿಗೊಳಿಸಿದರು. ಈ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ ರೈತರನ್ನು ಸಮಾಧಾನಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್, ರೈತ ಮೊರ್ಚಾ ಜಿಲ್ಲಾಧ್ಯಕ್ಷ ಚಿರುವುನಹಳ್ಳಿ ಲಕ್ಷ್ಮಣಗೌಡ, ರೋಣೂರು ಚಂದ್ರು,ನಾಗದೇನಹಳ್ಳಿ ಚಂದ್ರಶೇಖರ್ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ