ಬಿಎಸ್‌ವೈ ಜೊತೆಗಿನ ಮಾತುಕತೆ ಸಕ್ಸಸ್: ಬಿಜೆಪಿ ಸೇರುವುದಾಗಿ ಹೇಳಿದ ಶಾಸಕ

Published : Jul 30, 2021, 06:48 PM ISTUpdated : Jul 30, 2021, 06:52 PM IST
ಬಿಎಸ್‌ವೈ ಜೊತೆಗಿನ ಮಾತುಕತೆ ಸಕ್ಸಸ್: ಬಿಜೆಪಿ ಸೇರುವುದಾಗಿ ಹೇಳಿದ ಶಾಸಕ

ಸಾರಾಂಶ

* ಮತ್ತೊರ್ವ ಶಾಸಕ ಬಿಜೆಪಿ ಸೇರುವುದು ಖಚಿತ  * ಮಾಜಿ ಸಿಎಂ ಯಡಿಯೂರಪ್ಪ ಜತೆ ಮಾತುಕತೆ ಬಳಿಕ ಘೋಷಿಸಿದ ಶಾಸಕ * ಗುಂಡ್ಲುಪೇಟೆಗೆ ಭೇಟಿ ವೇಳೆ ಬಿಎಸ್‌ವೈ ಜೊತೆ ಚರ್ಚೆ ಮಾಡಿದ ಶಾಸಕ ಮಹೇಶ್

ಚಾಮರಾಜನಗರ, (ಜು.30): ಬಿಎಸ್​ಪಿ ಪಕ್ಷದಿಂದ ಅಮಾನತುಗೊಂಡಿರುವ ಕೊಳ್ಳೇಗಾಲ ಶಾಸಕ ಎನ್​.ಮಹೇಶ್ ಅವರು ಬಿಜೆಪಿ ಸೇರುವುದು ಖಚಿತವಾಗಿದೆ.

ಹೌದು...ಕಳೆದ ಹಲವು ದಿನಗಳಿಂದ ಬಿಜೆಪಿ ಸೇರುವ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಸೂಚನೆ ನೀಡಿದ್ದ ಎನ್​.ಮಹೇಶ್ ಇಂದು (ಶುಕ್ರವಾರ) ಅಧಿಕೃತ ಹೇಳಿಕೆ ನೀಡಿದ್ದಾರೆ. 

ಬಿಎಸ್‌ವೈ ಭೇಟಿ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಶಾಸಕ

ಗುಂಡ್ಲುಪೇಟೆಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಬಿಜೆಪಿ ಸೇರುವ ಬಗ್ಗೆ ಬಹಿರಂಗವಾಗಿ ಹೇಳಿದರು.

ಬಿಜೆಪಿಗೆ ಬರುವಂತೆ ಯಡಿಯೂರಪ್ಪ ಆಹ್ವಾನಿಸಿದ್ದಾರೆ. ಶೀಘ್ರದಲ್ಲೇ ಬಿಜೆಪಿ ಸೇರುವ ದಿನಾಂಕ ನಿಗದಿಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಕಾರ್ಯಕರ್ತರ ಮನವಿ ಮೇರೆಗೆ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ. ಎರಡು ವರ್ಷದಿಂದಲೂ ಬಿಎಸ್​ವೈ ಬಿಜೆಪಿ ಸೇರುವಂತೆ ಹೇಳುತ್ತಿದ್ದರು. ಆದರೆ ಕಾರ್ಯಕರ್ತರ ಅಭಿಪ್ರಾಯ ಪಡೆಯಲು ಇಷ್ಟು ದಿನ ಬೇಕಾಯ್ತು. ಹೀಗಾಗಿ ಯಾವುದೇ ಷರತ್ತುಗಳಿಲ್ಲದೆ ಈಗ ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!