ಕರ್ನಾಟಕದ ಮತ್ತೋರ್ವ ಬಿಜೆಪಿ ಸಂಸದರಿಗೆ ಕೊರೋನಾ ದೃಢ

Published : Aug 19, 2020, 03:19 PM ISTUpdated : Aug 19, 2020, 03:25 PM IST
ಕರ್ನಾಟಕದ ಮತ್ತೋರ್ವ ಬಿಜೆಪಿ ಸಂಸದರಿಗೆ ಕೊರೋನಾ ದೃಢ

ಸಾರಾಂಶ

ಕೊಪ್ಪಳ ಜಿಲ್ಲೆಯ ಮೂರು ಶಾಸಕರಿಗೆ ಕೊರೋನಾ ಸೋಂಕು ತಗುಲಿದ್ದ ಆಯ್ತು. ಇದೀಗ ಸಂಸದರಿಗೆ ಕೊರೋನಾ ಪಾಸಿಟಿವ್.

ಕೊಪ್ಪಳ, (ಆ.19): ಕೊಪ್ಪಳ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಸಾಮಾಜಿಕ ಜಾಲತಾಣಗಳಲ್ಲಿ ಖಚಿತಪಡಿಸಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಒಳಗಾಗಿದ್ದಾರೆ. ಮಂಗಳವಾರ ಅಷ್ಟೇ ಕರಡಿ ಸಂಗಣ್ಣ ಅವರು ಸಿಂಧನೂರು ನಗರಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯರುಗಳನ್ನ ಸನ್ಮಾನಿಸಿದ್ದರು. ಅಲ್ಲದೇ ಹಲವರನ್ನ ಭೇಟಿ ಮಾಡಿದ್ದು, ಇದೀಗ ಅವರೆಲ್ಲರಿಗೂ ಕೊರೋನಾ ಆತಂಕ ಶುರುವಾಗಿದೆ.

ಸಂಸದ ಶ್ರೀನಿವಾಸ ಪ್ರಸಾದ್‌ಗೆ ಕೊರೋನಾ ದೃಢ: ಸಿಎಂ ಪುತ್ರ ವಿಜಯೇಂದ್ರಗೆ ಆತಂಕ..!

ಈ ಬಗ್ಗೆ  ಟ್ವೀಟ್ ಮಾಡಿರುವ ಸಂಗಣ್ಣ ಕರಡಿ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕೊರೋನಾ ಲಕ್ಷಣ ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಈಗಾಗಲೇ ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕರುಗಳಿಗೆ ಕೊರೋನಾ ತಗುಲಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ