ಸಿದ್ದರಾಮಯ್ಯ ಸರ್ಕಾರಿ ಸಮಾವೇಶವನ್ನು ಕಾಂಗ್ರೆಸ್‌ ಸಮಾವೇಶ ಮಾಡಿದ್ರು: ಕೋಟ ಶ್ರೀನಿವಾಸ್ ಪೂಜಾರಿ

Published : Mar 15, 2024, 09:00 PM IST
ಸಿದ್ದರಾಮಯ್ಯ ಸರ್ಕಾರಿ ಸಮಾವೇಶವನ್ನು ಕಾಂಗ್ರೆಸ್‌ ಸಮಾವೇಶ ಮಾಡಿದ್ರು: ಕೋಟ ಶ್ರೀನಿವಾಸ್ ಪೂಜಾರಿ

ಸಾರಾಂಶ

ಸಮಾವೇಶದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿದ್ದರೆ ಯಾವುದೇ ತಪ್ಪು ಇಲ್ಲ, ಆದರೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಖರ್ಚಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಾವೇಶವನ್ನು ಮಾಡಿದ್ದಾರೆ ಅದು ತಪ್ಪು ಎಂದ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ(ಮಾ.15):  ಉಡುಪಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಉಡುಪಿಯ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳನ್ನು ಪ್ರೇಕ್ಷಕರನ್ನಾಗಿ ಕೂರಿಸಿದ್ದ ಬಗ್ಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ರೀತಿ ಸಮಾವೇಶ ಮಾಡಿದರೆ ಗೌರವ ಬರುವುದಿಲ್ಲ ಎಂದಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿದ್ದರೆ ಯಾವುದೇ ತಪ್ಪು ಇಲ್ಲ, ಆದರೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಖರ್ಚಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಾವೇಶವನ್ನು ಮಾಡಿದ್ದಾರೆ ಅದು ತಪ್ಪು ಎಂದರು.

ಕೋಟಾ ಶ್ರೀನಿವಾಸ ಆಯ್ಕೆಯಿಂದ ನಾಲ್ಕು ಕ್ಷೇತ್ರ ಮೇಲೆ ಪ್ರಭಾವ; ಚುನಾವಣೆಯಲ್ಲಿ ಬಿಜೆಪಿಗೆ ಆನೆ ಬಲ?

ಅಲ್ಲದೇ ಬಿಜೆಪಿಯ ಬಗ್ಗೆ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಮೋದಿ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವ ಕೆಟ್ಟ ಸಂಪ್ರದಾಯವನ್ನು ಸಿಎಂ ಮುಂದುವರಿಸಿದ್ದಾರೆ. ಪ.ಜಾತಿ ಪಂಗಡದ ಹಣ ಗ್ಯಾರಂಟಿಗೆ ಬಳಕೆ ಮಾಡಿದ್ದು ಮೋಸ ಅಲ್ಲವೇ ಎಂದು ಕೋಟ ಪ್ರಶ್ನಿಸಿದರು.

ಅಂಬೇಡ್ಕರ್‌ಸಂವಿಧಾನದ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ, ಅಂಬೇಡ್ಕ‌ರ್ ಅವರ ಅಂತ್ಯ ಸಂಸ್ಕಾರಕ್ಕೂ ಕಾಂಗ್ರೆಸ್ ಜಾಗ ಕೊಡಲಿಲ್ಲ. ಚುನಾವಣೆಯಲ್ಲಿ ಅಂಬೇಡ್ಕರನ್ನು ಸೋಲಿಸಿದ್ದು ಇದೇ ಕಾಂಗ್ರೆಸ್‌ ಪಕ್ಷ. ಜನಸಂಘ ಅಂಬೇಡ್ಕ‌ರ್ ಅವರ ಏಜಂಟ್ ಆಗಿ ಕೆಲಸ ಮಾಡಿತ್ತು ಎಂದು ತಿರುಗೇಟು ನೀಡಿದರು.

ಬಿಜೆಪಿ ಶಾಸಕರ ಗೈರು ಸರಿ: ಗ್ಯಾರೆಂಟಿ ಸಮಾವೇಶಕ್ಕೆ ಉಡುಪಿಯ 5 ಶಾಸಕರು ಗೈರಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಕಾರ್ಯಕ್ರಮಕ್ಕೆ ಅದರದ್ದೇ ಆದ ಗೌರವ ಇರುತ್ತದೆ. ಆದರೆ ಸರ್ಕಾರದ ಕಾರ್ಯಕ್ರಮವನ್ನು ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಕಾರ್ಯಕ್ರಮವಾಗಿ ಪರಿವರ್ತಿಸಿದ್ದರು. ಈ ಕಾರಣಕ್ಕಾಗಿ ಬಿಜೆಪಿ ಶಾಸಕರು ಕಾರ್ಯಕ್ರಮ ಬಹಿಷ್ಕರಿಸಿರಬಹುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ