‘ಸಿದ್ದರಾಮಯ್ಯ ಬಜೆಟ್ ಯಾಕೆ ಬೇಡ ಅಂದಿದ್ದು ಈಗ ಅರ್ಥ ಆಗಿದೆ’

Published : Jul 11, 2018, 08:40 PM ISTUpdated : Jul 12, 2018, 07:38 AM IST
‘ಸಿದ್ದರಾಮಯ್ಯ ಬಜೆಟ್ ಯಾಕೆ ಬೇಡ ಅಂದಿದ್ದು ಈಗ ಅರ್ಥ ಆಗಿದೆ’

ಸಾರಾಂಶ

ಬಜೆಟ್ ಬೇಡ, ಪೂರಕ ಬಜೆಟ್ ಮಂಡಿಸಿ ಎಂದಿದ್ದ ಸಿದ್ದರಾಮಯ್ಯ ಕುಮಾರಸ್ವಾಮಿ ಬಜೆಟ್ ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಸೀಮಿತ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಿನೊಂದಿಗೆ ಮಲತಾಯಿ ಧೋರಣೆ

ಬೆಂಗಳೂರು:  ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ವಿರುದ್ಧ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ತುಂಬಾ ಪ್ರಯಾಸದ ನಂತರ ತಮ್ಮ ಕನಸಿನ ಬಜೆಟ್ ಮಂಡಿಸಿದ್ದಾರೆ. ಬಲ್ಲವರು ಇದನ್ನು ಗಜಪ್ರಸವ ಎಂದು ಹೇಳುತ್ತಾರೆ, ಎಂದು ಪೂಜಾರಿ ಈ ಸಂದರ್ಭದಲ್ಲಿ ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯರಂತಹ ಒಬ್ಬ ಮುತ್ಸದ್ದಿ ಬಜೆಟ್ ಬೇಡ, ಪೂರಕ ಬಜೆಟ್ ಮಂಡಿಸಿ ಎಂದು ಹೇಳಿದ್ದರು. ಆದರೂ ಕುಮಾರಸ್ವಾಮಿ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಬಜೆಟ್ ಯಾಕೆ ಬೇಡ ಎಂದು ಹೇಳಿದ್ದರು ಎಂದು ಈಗ ಅರ್ಥ ಆಗಿದೆ, ಎಂದು ಶ್ರೀನಿವಾಸ್ ಪೂಜಾರಿ ಮಾರ್ಮಿಕವಾಗಿ ಟೀಕಿಸಿದ್ದಾರೆ.

ಕುಮಾರಸ್ವಾಮಿ ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಬಜೆಟ್ ತಂದು ನಿಲ್ಲಿಸಿದ್ದಾರೆ. ಮೂರ್ನಾಲ್ಕು ಜಿಲ್ಲೆಗೆ ಪೂರಕ ಯೋಜನೆ ಜಾರಿ ಮಾಡಿದ್ದರೆ ಸಾಕಿತ್ತು. ಬಜೆಟ್ ಸರ್ವವ್ಯಾಪಿ ಹಾಗೂ ಸರ್ವಸ್ಪರ್ಶಿ ಆಗಿರಬೇಕು, ಇಲ್ಲವಾದರೆ ಏನಾಗುತ್ತೆ ಅನ್ನೋದಕ್ಕೆ ಈ ಬಜೆಟ್ ಸಾಕ್ಷಿ, ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗಕ್ಕೆ ಅನ್ಯಾಯವಾಗಿದೆ ಎಂದು ಅನೇಕ ಶಾಸಕರು ಹೇಳಿದ್ದಾರೆ. ತಾಯಿಯಂತೆ ಇಡೀ ರಾಜ್ಯವನ್ನು ಮಮತೆಯಿಂದ ನೋಡದೆ ಕರಾವಳಿ, ಮಲೆನಾಡು ಭಾಗಕ್ಕೆ ಮಲತಾಯಿ ಧೋರಣೆ ಮಾಡಿದ್ದಾರೆ. ಪರಿಣಾಮವಾಗಿ, ಬಜೆಟ್ ನಿಂದ ಪ್ರತ್ಯೇಕತೆ ಕೂಗು ಎದ್ದಿದೆ. ಪ್ರತ್ಯೇಕ ರಾಜ್ಯದ ಕೂಗು ಬರಲು ಸಿಎಂ ಕುಮಾರಸ್ವಾಮಿ ಕಾರಣ ಹಾಗೂ ಅದಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ಕಾರಣ, ಎಂದು ಶ್ರೀನಿವಾಸ್ ಪೂಜಾರಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!