ಸಿದ್ದರಾಮೋತ್ಸವದಿಂದ ಬಿಜೆಪಿಗೆ ನಡುಕ, ಅದಕ್ಕೇ ಟೀಕೆ: ಎಂಬಿಪಾ

Published : Jul 12, 2022, 09:17 AM IST
ಸಿದ್ದರಾಮೋತ್ಸವದಿಂದ ಬಿಜೆಪಿಗೆ ನಡುಕ, ಅದಕ್ಕೇ ಟೀಕೆ: ಎಂಬಿಪಾ

ಸಾರಾಂಶ

*   ಸಾಮಾನ್ಯ ರೈತ ಕುಟುಂಬದಿಂದ ಬಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ *  ಸಿದ್ದು ದಾಖಲೆ ಸಂಖ್ಯೆಯ ಬಜೆಟ್‌ ಮಂಡಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದರು *  ಜನನಾಯಕರ ಅಮೃತ ಮಹೋತ್ಸವವನ್ನು ಜನರು ಹಾಗೂ ಬೆಂಬಲಿಗರು ಮಾಡುತ್ತಿರುವುದು ತಪ್ಪೇ? 

ಬೆಂಗಳೂರು(ಜು.12):  ಸಿದ್ದರಾಮಯ್ಯ ಅವರ ಜನ್ಮದಿನ ಅಮೃತ ಮಹೋತ್ಸವದ ಬಗ್ಗೆ ಬಿಜೆಪಿಗೆ ನಡುಕ ಶುರುವಾಗಿದೆ. ಎಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುತ್ತಾರೆಂಬ ಭಯ ಶುರುವಾಗಿದೆ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅನಗತ್ಯವಾಗಿ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ತಿರುಗೇಟು ನೀಡಿದ್ದಾರೆ.

‘ಇದೇ ವೇಳೆ, ಸಿದ್ದರಾಮಯ್ಯ ಜನ ನಾಯಕ. ಸಿದ್ದರಾಮಯ್ಯ ಅವರ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನೋಡಿದ ಬಳಿಕ ಕಟೀಲ್‌ ಮಾತನಾಡಲಿ. ಅದಕ್ಕೂ ಮೊದಲು ಅನಗತ್ಯವಾಗಿ ಮಾತನಾಡುವುದು ಬೇಡ’ ಎಂದು ಸವಾಲು ಎಸೆದರು.

ಬಿಜೆಪಿ ವಿರುದ್ಧ ಜನರು ಸಿಡಿದೇಳುವ ದಿನ ದೂರ ಇಲ್ಲ: ಎಂ.ಬಿ.ಪಾಟೀಲ್‌

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವುದೇ ವ್ಯಕ್ತಿಯು 50, 75, 100 ವರ್ಷ ಪೂರೈಸುವುದು ಮೈಲುಗಲ್ಲ. ಸಿದ್ದರಾಮಯ್ಯ ಅವರು ಸಾಮಾನ್ಯ ರೈತ ಕುಟುಂಬದಿಂದ ಬಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ದಾಖಲೆ ಸಂಖ್ಯೆಯ ಬಜೆಟ್‌ ಮಂಡಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದರು. ಕೋಟ್ಯಂತರ ಜನ ಬೆಂಬಲಿಗರನ್ನು ಹೊಂದಿರುವ ಜನನಾಯಕರ ಅಮೃತ ಮಹೋತ್ಸವವನ್ನು ಜನರು ಹಾಗೂ ಬೆಂಬಲಿಗರು ಮಾಡುತ್ತಿರುವುದು ತಪ್ಪೇ?’ ಎಂದು ಪ್ರಶ್ನಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌