
ಬೆಂಗಳೂರು, (ಆ.05): ಕೊರೋನಾ ಸೋಂಕಿನಿಂದಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಕೆಪಿಸಿಸಿ ಕಾನೂನು ಘಟಕದಿಂದ ವಕೀಲ ಸೂರ್ಯ ಮುಕುಂದರಾಜ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಇಂದು (ಬುಧವಾರ) ದೂರು ನೀಡಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ: ಕಾಂಗ್ರೆಸ್ ಮುಖಂಡನ ಬಂಧನ
ಮತ್ತೆ ಹುಟ್ಟಿ ಬರಬೇಡ, ಬಂದರೂ ಜಾತಿ ಮಾಡಬೇಡ. ಮಾಂಸ ತಿಂದು ದೇವಸ್ಥಾನಕ್ಕೆ ಹೋಗೊ ನಾಲಾಯಕ್ , ಮೊಟ್ಟೇಲಿ ಮಕ್ಕಳ ಜಾತಿ ಭೇದ ಮಾಡೊ ಭಿಕಾರಿ ಹೋಗು ಎಂದು ಮಂಜು ಮತ್ತು ಆನಂದ್ ಕುಮಾರ್ ಎನ್ನುವರ ಹೆಸರಿನಿಂದ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಲಾಗಿದೆ.
ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ ಹಾಕಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸದಸ್ಯನನ್ನು ಪೊಲೀಸರು ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.