'ಸಿಟಿ ರವಿ ಮಾಡಿದ ತಪ್ಪು ಬಿಜೆಪಿ ಮುಖಂಡರಿಗೆ ಕಾಣುತ್ತಿಲ್ಲವೇ?'

Published : Feb 24, 2023, 02:00 AM IST
'ಸಿಟಿ ರವಿ ಮಾಡಿದ ತಪ್ಪು ಬಿಜೆಪಿ ಮುಖಂಡರಿಗೆ ಕಾಣುತ್ತಿಲ್ಲವೇ?'

ಸಾರಾಂಶ

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದ ಅದೇ ರವಿ ಇಂದು ಮಾಡಿದ್ದಾದರೂ ಏನು? ದೇವರ ಬಗ್ಗೆ ಅಪಾರ ಭಕ್ತಿ ಶ್ರದ್ಧೆ ಹೊಂದಿರುವ ಅವರು ಇದೀಗ ತಾವೇ ತಪ್ಪು ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿದ್ದು, ದೆವ್ವದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ ಆಗಿದೆ ಎಂದು ಲೇವಡಿ ಮಾಡಿದ ಟಿ. ಈಶ್ವರ. 

ಲಕ್ಷ್ಮೇಶ್ವರ(ಫೆ.24):  ರಾಜ್ಯದ ಬಿಜೆಪಿ ಮುಖಂಡ, ಪ್ರಖರ ಹಿಂದುತ್ವವಾದಿ ಎಂದು ಹೇಳಿಕೊಳ್ಳುವ ಸಿ.ಟಿ. ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದನ್ನು ತಪ್ಪು ಎಂದು ಬಿಜೆಪಿಯ ಯಾವೊಬ್ಬ ನಾಯಕರು ಹೇಳದಿರುವುದು ಯಾಕೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಈಶ್ವರ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರಕ​ಟ​ಣೆ ನೀಡಿರುವ ಅವರು, ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದ ಅದೇ ರವಿ ಇಂದು ಮಾಡಿದ್ದಾದರೂ ಏನು? ದೇವರ ಬಗ್ಗೆ ಅಪಾರ ಭಕ್ತಿ ಶ್ರದ್ಧೆ ಹೊಂದಿರುವ ಅವರು ಇದೀಗ ತಾವೇ ತಪ್ಪು ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿದ್ದು, ದೆವ್ವದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ ಆಗಿದೆ ಎಂದು ಲೇವಡಿ ಮಾಡಿದರು. ತಪ್ಪು ಮಾಡಿದ್ದರೂ ತಪ್ಪು ಮಾಡಿಲ್ಲ ಎಂದು ಹೇಳಿಕೆ ನೀಡುತ್ತಿರುವ ಸಿ.ಟಿ. ರವಿ ಅವರ ಭಂಡತನ ಎಲ್ಲ ಜನರಿಗೂ ತಿಳಿಯುತ್ತಿದೆ. ಅದರಲ್ಲೂ ಸುಳ್ಳು ಹೇಳುವವರು, ಭಂಡತನದ ಮಾತುಗಳನ್ನಾಡುವವರು ಇದ್ದರೆ ಅವರು ಬಿಜೆಪಿ ಮುಖಂಡರೇ ಆಗಿರುತ್ತಾರೆ. ಒಡೆದಾಳುವ ಮತ್ತು ಹೊಡೆದಾಳುವ ಬ್ರಿಟಿಷ್‌ ಸಂಸ್ಕೃತಿಯೇ ಬಿಜೆಪಿಯಲ್ಲಿದೆ ಎಂದು ಟೀಕಿಸಿದರು.

ಒಗ್ಗಟ್ಟು ಪ್ರದರ್ಶಿಸಿದ ರೋಣ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು..!

ಬಿಜೆಪಿಯ ಮುಖಂಡರು ಬೇರೆಯವರು ಇಂತಹವುಗಳನ್ನು ಮಾಡಿದರೆ ಅದಕ್ಕೆ ದೇವರು, ಭಯ, ಭಕ್ತಿ ಬಗ್ಗೆ ಮಾತನಾಡುತ್ತಾ ಭಗವದ್ಗೀತೆ ನುಡಿಯುತ್ತಾರೆ. ಆದರೆ ತಮ್ಮ ತಪ್ಪುಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದರು. ಸಿ.ಟಿ. ರವಿ ದೇವರ ಸನ್ನಿಧಿಗೆ ಮಾಂಸಾಹಾರವನ್ನು ಸೇವಿಸಿ ಹೋಗಿರುವುದು ತಪ್ಪು ಎಂದಾದರೆ ಬಿಜೆಪಿಯವರು ದೇವಸ್ಥಾನವನ್ನು ಗೋಮೂತ್ರದಿಂದ ಸ್ವಚ್ಛಗೊಳಿಸಿ, ಪ್ರಾಯಶ್ಚಿತ ಮಾಡಿಕೊಳ್ಳಬೇಕು ಎಂದು ತಿಳಿ​ಸಿ​ದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!