
ಚಿಕ್ಕಮಗಳೂರು, (ಜೂನ್.22): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಸಿರು ಶಾಲು ಹಾಕಿಕೊಂಡಿದ್ದಕ್ಕೆ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ವ್ಯಂಗ್ಯವಾಡಿದ್ದಾರೆ.
ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಕದ ರಾಜ್ಯಕ್ಕೆ ಹೋಗಿ ಹಸಿರು ಶಾಲು ಹಾಕಿಕೊಳ್ಳುತ್ತೀರಿ. ನಮ್ಮ ರಾಜ್ಯದಲ್ಲಿ ಕೇಸರಿ ಶಾಲು ಧರಿಸಿ ವಂಚಿಸುತ್ತಿದ್ದೀರಿ ಎಂದು ಸಚಿನ್ ಮೀಗಾ ಟೀಕಿಸಿದ್ದಾರೆ.
ಮೋಡ ಸೂರ್ಯನನ್ನು ಮರೆ ಮಾಡಲು ಸಾಧ್ಯವೇ?: ಸಿ.ಟಿ. ರವಿ ನಿಗೂಢ ಹೇಳಿಕೆ
ಚಿಕ್ಕಮಗಳೂರು ಜನರಿಗೆ ಕೇಸರಿ ಶಾಲು ತೋರಿಸಿ ಗೆಲುವು ಸಾಧಿಸಿದ್ದೀರಿ. ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ನೀವು ಗೆದ್ದಿದ್ದೀರಿ. ಗೋಸುಂಬೆ ತರ ಬಣ್ಣ ಬದಲಿಸಿ ರಾಜಕೀಯ ಮಾಡ್ತಿದ್ದೀರಿ. ನಮ್ಮಲ್ಲೂ ಹಸಿರು ಶಾಲು ಧರಿಸಿ ರೈತರಿಗೆ ನ್ಯಾಯ ಕೊಡಿಸಿ ಎಂದರು.
ನಮ್ಮ ಜಿಲ್ಲೆಯಲ್ಲಿ ಮಳೆಯಿಂದಾಗಿ ನೂರಾರು ಜನ ಮನೆ ಕಳೆದುಕೊಂಡಿದ್ದಾರೆ. ನೀವು ಹಸಿರು ಶಾಲು ಧರಿಸಿದ್ದಕ್ಕೆ ನಮಗೆ ಸಂತಸವಾಗುತ್ತಿದೆ. ಆದರೆ ಪ್ರಾಮಾಣಿಕ ಪ್ರಯತ್ನ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಿಸಿ ಎಂದು ಸಿ.ಟಿ.ರವಿಗೆ ಸಚಿನ್ ಮೀಗಾ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.