ಮೈಸೂರಲ್ಲಿ IAS ಆಫಿಸರ್ಸ್ ಸಮರ : ಲೀಡರ್‌ಗಳೇ ಕಾರಣ ಎಂದ ಡಿಕೆಶಿ

Suvarna News   | Asianet News
Published : Jun 04, 2021, 11:23 AM IST
ಮೈಸೂರಲ್ಲಿ IAS ಆಫಿಸರ್ಸ್ ಸಮರ : ಲೀಡರ್‌ಗಳೇ ಕಾರಣ ಎಂದ ಡಿಕೆಶಿ

ಸಾರಾಂಶ

ಮೈಸೂರಿನಲ್ಲಿ IAS ಅಧಿಕಾರಿಗಳ ನಡುವೆ ಸಮರ  ಅಲ್ಲಿನ ಲೀಡರ್‌ಗಳು ಸಚಿವರೇ ಫೈಟ್ ಮಾಡುತ್ತಿದ್ದಾರೆ, ಅಧಿಕಾರಿಗಳು ಮಾಡೋದು ದೊಡ್ಡದಲ್ಲ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು (ಜೂ.04):  ಮೈಸೂರಿನಲ್ಲಿ IAS ಅಧಿಕಾರಿಗಳ ನಡುವೆ ಸಮರ ಭುಗುಲೆದ್ದಿದ್ದು, ಅಲ್ಲಿನ ಲೀಡರ್‌ಗಳು ಸಚಿವರೇ ಫೈಟ್ ಮಾಡುತ್ತಿದ್ದಾರೆ, ಅಧಿಕಾರಿಗಳು ಮಾಡೋದು ದೊಡ್ಡದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. 

ಬೆಂಗಳೂರಿನಲ್ಲಿಂದು ಮಾತನಾಡಿದ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಮರದ ಬಗ್ಗೆ ಪ್ರತಿಕ್ರಿಯಿಸಿದರು. 

ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್ .

ಯತ ರಾಜಾ ತತಾ ಪ್ರಜಾ.  ಲೀಡರ್ ಗಳು, ಸಚಿವರೇ ಫೈಟ್ ಮಾಡುತ್ತಿದ್ದಾ. ಅಧಿಕಾರಿಗಳ ಅಸಮಾಧಾನ ಭುಗಿಲೇಳಲು ಇಲ್ಲಿನ ಲೀಡರ್‌ಗಳೇ ಉದಾಹರಣೆಯಾಗಿದ್ದಾರೆ. ಮಂತ್ರಿಗಳು ಹೇಗೆ ಮಾಡ್ತಾರೋ ಆಫಿಸರ್‌ಗಳು ಹಾಗೆ ಮಾಡುತ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಡಿಕೆಶಿ ಮಾರ್ಮಿಕವಾಗಿ ನುಡಿದರು.  

ರಾಜ್ಯಪಾಲರ ಭೇಟಿ : ಇನ್ನು ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ಈ ವೇಳೆ ಲಸಿಕೆ ವಿಚಾರವಾಗಿ ಮನವಿ ಮಾಡುವುದಾಗಿ ಹೇಳಿದರು. 

ಲಾಕ್‌ಡೌನ್‌ನಿಂದ ರೈತರಿಗೇ ಹೆಚ್ಚು ತೊಂದರೆ: ಡಿಕೆಶಿ
 
ಇಂದು ಸಂಜೆ ರಾಜ್ಯಪಾಲರ ಅಪಾಯಿಂಟ್ ಮೆಂಟ್ ಕೇಳಿದ್ದೇವೆ.  ರಾಜ್ಯದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಬೇಕು. ಉಚಿತ ಲಸಿಕೆಗೆ ಸರ್ಕಾರಕ್ಕೆ ಸೂಚನೆ ಕೊಡುವಂತೆ ರಾಜ್ಯ ಪಾಲರಿಗೆ ಮನವಿ ಮಾಡುತ್ತೇವೆ. ಅಲ್ಲದೆ ಕಾಂಗ್ರೆಸ್ ಶಾಸಕರ ಪಾಲಿನ 1 ಕೋಟಿ ಹಣ ಬಿಡುಗಡೆಗೆ ಸೂಚನೆ ನೀಡುವಂತೆ ಸಹಾ ರಾಜ್ಯ ಪಾಲರಲ್ಲಿ ಮನವಿ ಮಾಡುತ್ತೇವೆ ಎಂದರು. 

ಸದ್ಯ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಇಲ್ಲ.  ಕೋರ್ಟ್ ಅಷ್ಟೋ ಇಷ್ಟೋ ಪ್ರಾಣ ಉಳಿಸಿದೆ. ಎಣ್ಣೆ ಮಾರೋಕೆ 4 ಗಂಟೆ ಅವಕಾಶ ಕೊಟ್ಟಿದ್ದಾರೆ. ರೈತರ ತರಕಾರಿ ಮಾರೋಕೆ ಅವಕಾಶ ಇಲ್ಲಾ.  ಅದನ್ನ ರಾಜ್ಯಪಾಲರ ಗಮನಕ್ಕೆ ತರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ