
ಬೆಂಗಳೂರು, (ಅ.06): ಸಿಬಿಐ ದಾಳಿ ವೇಳೆ ಸಿಕ್ಕ ಹಣದ ಬಗ್ಗೆ ಎದ್ದಿರುವ ಗೊಂದಲಗಳಿಗೆ ತೆರೆ ಎಳೆದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿನ್ ನಾರಾಯಣ್ ಮನೆಯಲ್ಲಿ 50 ಲಕ್ಷ ಕ್ಯಾಶ್ ಸಿಕ್ಕಿದೆಯಂತೆ ಎಲ್ಲವನ್ನು ಸೇರಿಸಿ 57 ಲಕ್ಷ ಎಂದು ಅಧಿಕಾರಿಗಳು ಹೇಳಿರಬೇಕು ಎಂದಿದ್ದಾರೆ.
ಇಂದು (ಮಂಗಳವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಸಿಬಿಐ ದಾಳಿ ವೇಳೆ ದೆಹಲಿ ಮನೆಯಲ್ಲಿ ಒಂದುವರೆ ಲಕ್ಷ ಹಣ ಸಿಕ್ಕಿದೆಯಂತೆ, ಬೆಂಗಳೂರಿನ ನನ್ನ ಮನೆಯಲ್ಲಿ 1 ಲಕ್ಷ 77 ಸಾವಿರ, ಕಛೇರಿಯಲ್ಲಿ 3.5 ಲಕ್ಷ ರೂಪಾಯಿ ಹಣ ಸಿಕ್ಕಿದೆಯಂತೆ. ಉಳಿದಂತೆ ದೊಡ್ಡಆಲನಹಳ್ಳಿ ನಿವಾಸ, ಕೋಡಿಹಳ್ಳಿಯ ನನ್ನ ತಾಯಿ ನಿವಾಸದಲ್ಲಿಯೂ ಏನೂ ಸಿಕ್ಕಿಲ್ಲ. ಮುಂಬೈನಲ್ಲಿ ನನ್ನ ಮಗಳ ಹೆಸರಲ್ಲಿ ಒಂದು ಫ್ಲಾಟ್ ಇದೆ. ಆದರೆ 6 ವರ್ಷಗಳಿಂದ ನಾನು ಅಲ್ಲಿಗೆ ಹೋಗಿಲ್ಲ. ಇನ್ನು ಕನಕಪುರದಲ್ಲಿಯೂ ನನ್ನ ಮನೆಯಿದೆ. ಆದರೆ ಅಲ್ಲಿ ಯಾವುದೇ ಅಧಿಕಾರಿಗಳು ಹೋಗಿಲ್ಲ ಎಂದರು.
ದಾಳಿ ಮಾಡಿದ್ದ ಸಿಬಿಐ ಅಧಿಕಾರಿಗಳಿಗೆ ಥ್ಯಾಂಕ್ಸ್ ಹೇಳಿದ ಡಿಕೆ ಸುರೇಶ್, ಏನಿದು ಅಚ್ಚರಿ..?
ಇನ್ನು ಸಚಿನ್ ನಾರಾಯಣ್ ಮನೆಯಲ್ಲಿ 50 ಲಕ್ಷ ಹಣ ಸಿಕ್ಕಿದೆಯಂತೆ. ಅವರದ್ದು ಹಲವು ಉದ್ಯಮಗಳಿವೆ ಭಾನುವಾರ ಹಣ ಬಂದಿದ್ದರಿಂದ ಬ್ಯಾಂಕ್ ಗೆ ಹಾಕಲು ಆಗಿರಲಿಲ್ಲ ಎಂದಿದ್ದಾರೆ. ಎಲ್ಲವನ್ನು ಸೇರಿಸಿ ಸಿಬಿಐ ಅಧಿಕಾರಿಗಳು 57 ಲಕ್ಷ ಎಂದಿರಬೇಕು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.