
ಬೆಂಗಳೂರು, (ಜೂನ್.07): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಶಾಸಕರ ಸಹಿ ಸಂಗ್ರಹ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಹಿ ಸಂಗ್ರಹಿಸಿದ್ದರೆ ಆ ಶಾಸಕರ ಪಟ್ಟಿ ಬಿಡುಗಡೆ ಮಾಡಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಗೆ ಸವಾಲು ಹಾಕಿದರು.
ಅಶೋಕ್ ಸಹ ಸಿಎಂ ರೇಸ್ನಲ್ಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಬಿಎಸ್ವೈ ಆಪ್ತ
ರಾಜ್ಯದಲ್ಲಿ ಜನರು ಕೊರೋನಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಸಿಕೆ ಸಿಗದೇ ಪರದಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಸರ್ಕಾರದಲ್ಲಿರುವ ಶಾಸಕರು, ಸಚಿವರು, ಅಧಿಕಾರಕ್ಕಾಗಿ ಕಿತ್ತಾಡುತ್ತಿರುವುದಲ್ಲದೇ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರಿಗೆ ಚೆಲ್ಲಾಟ, ಜನರಿಗೆ ಪ್ರಾಣ ಸಂಕಟ ಎಂಬಂತಾಗಿದೆ ರಾಜ್ಯದ ಸ್ಥಿತಿ. ಇವರಿಗೆ ಮಾನ ಮರ್ಯಾದೆ ಇದ್ದರೆ ಸರ್ಕಾರ ನಡೆಸಲಿ. ಇಲ್ಲವಾದರೆ ಮನೆಗೆ ತೆರಳಲಿ ಎಂದು ವಾಗ್ದಾಳಿ ನಡೆಸಿದರು.
ಸಿಎಂ ಪರವಾಗಿ 65 ಶಾಸಕರ ಸಹಿ ಸಂಗ್ರಹ ಮಾಡಿದ್ದಾರಂತೆ. ಶಾಸಕರ ಸಹಿ ಸಂಗ್ರಹಿಸಿದ್ದರೆ ಅವರ ಪಟ್ಟಿ ಬಿಡುಗಡೆ ಮಾಡಲಿ. ಬಿಜೆಪಿ ನಾಯಕರು ರಾಜ್ಯದ ಜನರಿಗೆ ಬೂದಿ ನೀಡುತ್ತಿದ್ದಾರೆ. ಇಂತಹ ಆಡಳಿತ ನಡೆಸುವ ಬದಲು ರಾಜೀನಾಮೆ ನೀಡಿ ಕೆಳಗಿಳಿಯಲಿ ಎಂದು ಗುಡುಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.