ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೈ ಮೇಲುಗೈ: ಜನ ಬದಲಾವಣೆ ಬಯಸಿದ್ರಾ?

Published : Apr 30, 2021, 06:28 PM IST
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೈ ಮೇಲುಗೈ: ಜನ ಬದಲಾವಣೆ ಬಯಸಿದ್ರಾ?

ಸಾರಾಂಶ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಲವೆಡೆ ಕಾಂಗ್ರೆಸ್ ಅಧಿಕಾರಕ್ಕೇರಿದ್ದು, ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರಕ್ರಿಯಿಸಿದ್ದಾರೆ.

ಬೆಂಗಳೂರು, (ಏ.30): ಕೊರೋನಾ ಎರಡನೇ ಅಲೆಯ ಬಿಕ್ಕಟ್ಟಿನ ನಡುವೆಯೇ ನಡೆದಿದ್ದ ನಗರ ಸಭೆ ಚುನಾವಣೆ ಫಲಿತಾಂಶ ಇಂದು (ಏ.30) ಹೊರ ಬಿದ್ದಿದೆ. 

ಪಕ್ಷದ ಚಿಹ್ನೆಗಳ ಮೇಲೆ ನಡೆದ ನಗರಸಭೆ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಯಲ್ಲಿ ಬಹುತೇಕ ಹಲವೆಡೆ  ಕಾಂಗ್ರೆಸ್ ಅಧಿಕ್ಕಾರಕ್ಕೇರಿದ್ರೆ, ಆಡಳಿತರೂಢ ಬಿಜೆಪಿಗೆ ಮುಖಭಂಗವಾಗಿದೆ. ಈ ಚುನಾವಣೆಗಳ ಫಲಿತಾಂಶದಿಂದ ಕೈ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ. 

ಸ್ಥಳೀಯ ಸಂಸ್ಥೆ ಚುನಾವಣೆ: ಹಲವೆಡೆ ಅಧಿಕಾರಕ್ಕೇರಿದ ಕಾಂಗ್ರೆಸ್‌, ಮುದುಡಿದ ಕಮಲ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದುರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯದ ಜನತೆ ಕಾಂಗ್ರೆಸ್ ‌ಮೇಲೆ ವಿಶ್ವಾಸ ಇಟ್ಟಿದ್ದಾರೆ . ಸ್ಥಳಿಯ ಸಂಸ್ಥೆಯ 10 ಸ್ಥಳೀಯ ಸಂಸ್ಥೆಗಳಲ್ಲಿ ಏಳು ಕಡೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ . ಮಡಿಕೇರಿಯಲ್ಲಿ ಮಾತ್ರ ನಾವು ಸೋತಿದ್ದೇವೆ . ಎರಡು ಜೆಡಿಎಸ್ ಗೆದ್ದಿದೆ , ಒಂದೆಡೆ ಬಿಜೆಪಿ ಗೆದ್ದಿದೆ . ಹೀಗಾಗಿ ಕಾಂಗ್ರೆಸ್​ಗೆ ಬಹುಮತ ಬಂದಿದೆ ಎಂದರು.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಾವು ಉತ್ತಮ ಸಾಧನೆ ಮಾಡಿದ್ದೆವು . ಈಗ ಸ್ಥಳೀಯ ಸಂಸ್ಥೆಯಲ್ಲಿ ನಾವು ಗೆದ್ದಿದ್ದೇವೆ . ಇದು ರಾಜ್ಯದ ಒಟ್ಟಾರೆ‌ ಫಲಿತಾಂಶವಾಗಿದ್ದು , ರಾಜ್ಯದಲ್ಲಿ ಬದಲಾವಣೆಯಾಗಬೇಕು ಅಂತ ಜನ ಬಯಸಿದ್ದಾರೆ ಎಂದರು.

 ಇದೇ ವೇಳೆ ಚುನಾವಣೆಯಲ್ಲಿ ದುಡಿದ ಎಲ್ಲ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಧನ್ಯವಾದ ತಿಳಿಸಿದರು .

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ
ಬೆಳಗಾವಿ ಸದನದಲ್ಲೂ ಸಿಎಂ ಕುರ್ಚಿಯ ಕದನ!