ಕಾಂಗ್ರೆಸ್‌ ಹೋರಾಟದಿಂದ ಬಿಜೆಪಿ ಸರ್ಕಾರ ಭಯದಲ್ಲೇ ಬದುಕುತ್ತಿದೆ: ಡಿಕೆಶಿ

Published : Aug 24, 2022, 01:00 AM IST
ಕಾಂಗ್ರೆಸ್‌ ಹೋರಾಟದಿಂದ ಬಿಜೆಪಿ ಸರ್ಕಾರ ಭಯದಲ್ಲೇ ಬದುಕುತ್ತಿದೆ: ಡಿಕೆಶಿ

ಸಾರಾಂಶ

ಸರ್ಕಾರದ ಆಡಳಿತ ವೈಫಲ್ಯಗಳ ವಿರುದ್ಧದ ಕಾಂಗ್ರೆಸ್‌ ಯಾವುದೇ ಹೋರಾಟಕ್ಕೆ ಮುಂದಾದರೂ ಅದನ್ನು ತಡೆಯುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ:  ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಆ.23):  ಕಾಂಗ್ರೆಸ್‌ ಪಕ್ಷ ಯಾವುದೇ ಹೋರಾಟಗಳಿಗೆ ಮುಂದಾದರೂ ಅದನ್ನು ತಡೆಯುವ ಕೆಲಸ ಮಾಡುತ್ತಿರುವುದನ್ನು ನೋಡಿದರೆ ರಾಜ್ಯ ಬಿಜೆಪಿ ಸರ್ಕಾರ ಬರೀ ಭಯದಲ್ಲೇ ಬದುಕುತ್ತಿದೆ ಎನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದ ಆಡಳಿತ ವೈಫಲ್ಯಗಳ ವಿರುದ್ಧದ ಕಾಂಗ್ರೆಸ್‌ ಯಾವುದೇ ಹೋರಾಟಕ್ಕೆ ಮುಂದಾದರೂ ಅದನ್ನು ತಡೆಯುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ. ನಾವು ಮಡಿಕೇರಿ ಚಲೋ ಘೋಷಿಸಿದ ಬಳಿಕ ಅಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದೇ ಇದಕ್ಕೆ ಒಂದು ಉದಾಹರಣೆ. ಆ.26 ರಂದು ಮಡಿಕೇರಿ ಚಲೋ ನಡೆಸಲು ನಮ್ಮ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಘೋಷಿಸಿದ ಬಳಿಕ ಅಲ್ಲಿನ ಜಿಲ್ಲಾಧಿಕಾರಿ ಮೂಲಕ ಸರ್ಕಾರ 144 ಸೆಕ್ಷನ್‌ ಜಾರಿ ಮಾಡಿಸಿದೆ. ನಾವೇನು ಅಲ್ಲಿ ಕುಸ್ತಿ ಮಾಡೋಕೆ ಹೋಗ್ತಿದ್ವಾ? ನಮ್ಮನ್ನು ಸರ್ಕಾರ ಯಾವಾಗಲೂ ಕಾಮಾಲೆ ಕಣ್ಣಿನಲ್ಲಿ ನೋಡುತ್ತಿದೆ, ಭಯದಲ್ಲೇ ಈ ಸರ್ಕಾರ ಬದುಕುತ್ತಿದೆ’ ಎಂದರು.

ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್, ಬಂಧನ ಭೀತಿಯಿಂದ ಬಚಾವ್

‘ನಾವು ಮಡಿಕೇರಿಗೆ ಹೋದರೆ 1 ಲಕ್ಷ ಜನ ಸೇರುತ್ತಾರಂತೆ. ಅಷ್ಟುಜನ ಸೇರಿದರೆ ಸಮಸ್ಯೆ ಆಗುತ್ತಂತೆ. ಮಡಿಕೇರಿ ಒಳಗಡೆ ಹೋಗುವ ಎಲ್ಲಾ ಬಾರ್ಡರ್‌ ಸೀಜ್‌ ಮಾಡ್ತಿದ್ದಾರಂತೆ. ಅಲ್ಲದೆ, ನಮ್ಮ ಶಾಸಕರ ಮೇಲೆ ಸರ್ಕಾರ ಕಣ್ಣಿಟ್ಟಿದೆ. ನನ್ನ ಎಲ್ಲಾ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದೆ. ಸಿದ್ದರಾಮಯ್ಯ ಅವರು ಏನ್‌ ಮಾಡ್ತಿದ್ದಾರೆ ಎಂಬ ಮಾಹಿತಿ ಕಲೆ ಹಾಕ್ತಿದ್ದಾರೆ. ಇದಕ್ಕಾ ಸರ್ಕಾರ ಇರೋದು? ಇವರೇನು ಸರ್ಕಾರ ನಡೆಸುತ್ತಿದ್ದಾರಾ ಏನು ಮಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!