ನಾನು ಸಿದ್ದು ಒಂದಾಗಿದ್ದೇವೆ, ಬಿಜೆಪಿ ಆಟ 6 ತಿಂಗಳಷ್ಟೇ: ಡಿಕೆಶಿ

Published : Oct 04, 2022, 01:30 AM IST
ನಾನು ಸಿದ್ದು ಒಂದಾಗಿದ್ದೇವೆ, ಬಿಜೆಪಿ ಆಟ 6 ತಿಂಗಳಷ್ಟೇ: ಡಿಕೆಶಿ

ಸಾರಾಂಶ

‘ನಾವು ಒಗ್ಗಟ್ಟಾಗಿಯೇ ಇದ್ದೇವೆ. ಒಂದಾಗಿ ಕೆಲಸ ಮಾಡುತ್ತಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಡಿಕೆಶಿ-ಸಿದ್ದರಾಮಯ್ಯ ಒಂದಾಗಲಿ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ನಾವು ಒಂದಾಗಿಯೇ ಇದ್ದೇವೆ. ನಾವೀಗ ವಿರೋಧ ಪಕ್ಷದಲ್ಲಿದ್ದು, ಒಗ್ಗಟಾಗಿ ಕೆಲಸ ಮಾಡುತ್ತಿದ್ದೇವೆ’ ಎಂದರು.

ಮೈಸೂರು (ಅ.04): ‘ನಾವು ಒಗ್ಗಟ್ಟಾಗಿಯೇ ಇದ್ದೇವೆ. ಒಂದಾಗಿ ಕೆಲಸ ಮಾಡುತ್ತಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಡಿಕೆಶಿ-ಸಿದ್ದರಾಮಯ್ಯ ಒಂದಾಗಲಿ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ನಾವು ಒಂದಾಗಿಯೇ ಇದ್ದೇವೆ. ನಾವೀಗ ವಿರೋಧ ಪಕ್ಷದಲ್ಲಿದ್ದು, ಒಗ್ಗಟಾಗಿ ಕೆಲಸ ಮಾಡುತ್ತಿದ್ದೇವೆ’ ಎಂದರು.

ಮೊದಲು ನೀವು ನಿಮ್ಮ ಪಕ್ಷವನ್ನು ನೋಡಿಕೊಳ್ಳಿ. ನಿಮ್ಮ ಪಕ್ಷದಲ್ಲಿ ಎಷ್ಟುಗುಂಪಿದೆ? ಯಾವ್ಯಾವ ಸಚಿವರನ್ನು ಒಂದು ಮಾಡಬೇಕಿದೆ ಅದನ್ನು ನೋಡಿ. ಈಶ್ವರಪ್ಪನವರು ತಾವು ಸಚಿವರಾಗಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ತಮ್ಮ ವಿರುದ್ಧ ಮಾಡಲಾಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ‘ಬಿ’ ರಿಪೋರ್ಟ್‌ ಬರೆಸಿಕೊಂಡು ಸಚಿವರಾಗಲು ಕಾಯುತ್ತಿದ್ದಾರೆ. ಮೊದಲು ಅವರನ್ನು ಸಮಾಧಾನ ಮಾಡಿಕೊಳ್ಳಿ ಎಂದು ಬಿಜೆಪಿಯನ್ನು ಕುಟುಕಿದರು. ಭಾರತ ಐಕ್ಯತಾ ಯಾತ್ರೆಯಿಂದ ಬಿಜೆಪಿಯವರು ಹತಾಶರಾಗಿದ್ದಾರೆ ಎಂದು ಟೀಕಿಸಿದ ಅವರು, ‘ನಿಮ್ಮದು ಇನ್ನೇನಿದ್ದರೂ 6 ತಿಂಗಳ ಆಟ’ ಎಂದು ತಿರುಗೇಟು ನೀಡಿದರು.

ರಾಹುಲ್‌ ಗಾಂಧಿ ಮುಂದೆ ಅಪ್ಪನ ಕಳೆದುಕೊಂಡ ಪುಟಾಣಿ ಕಣ್ಣೀರು!

ರಾಹುಲ್‌ ಗಾಂಧಿ ಬಂದ ಕಡೆ ಕಾಂಗ್ರೆಸ್‌ ಗೆಲ್ಲಲ್ಲ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಯಾವಾಗ ಭವಿಷ್ಯ ಹೇಳುವುದನ್ನು ಕಲಿತರೊ ಗೊತ್ತಿಲ್ಲ. ಯೋಗಕ್ಕಿಂತ ಯೋಗಕ್ಷೇಮ ಮುಖ್ಯ. ‘ಆಪರೇಷನ್‌ ಕಮಲ’ದ ಯೋಗದಿಂದ ಅಧಿಕಾರಕ್ಕೆ ಬಂದವರು ಕೊರೋನಾ ಸಂದರ್ಭದಲ್ಲಿ ಜನರ ಯೋಗಕ್ಷೇಮ ವಿಚಾರಿಸಲಿಲ್ಲ. ಇನ್ನಾರು ತಿಂಗಳು ಅವರು ಸುಖವಾಗಿರಲಿ ಎಂದು ವ್ಯಂಗ್ಯವಾಡಿದರು.

ನಾನು, ಸಿದ್ದು ಅದೇ ಶರ್ಟ್‌ ಹಾಕ್ತೇವೆ, ಬಂಧಿಸ್ತೀರಾ: ಪೇಸಿಎಂ ಟೀಶರ್ಟ್‌ ಹಾಕಿದ್ದಕ್ಕೆ ಹುಡುಗನೊಬ್ಬನನ್ನು ಬಂಧಿಸಲಾಗಿದೆ. ನಾಳೆ ನಾನು, ಸಿದ್ದರಾಮಯ್ಯ ಅದೇ ಟೀಶರ್ಟ್‌ ಹಾಕ್ತೇವೆ, ನಮ್ಮನ್ನೂ ಅರೆಸ್ಟ್‌ ಮಾಡ್ತಾರಾ? ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿಯಲ್ಲಿ ಭಾರತ್‌ ಐಕ್ಯತಾ ಯಾತ್ರೆ ಆರಂಭಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೇಸಿಎಂ ಟೀಶರ್ಟ್‌ ಹಾಕಿದ ಯುವಕನನ್ನು ಬಂಧಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾಳೆ ನಾನು, ಸಿದ್ದರಾಮಯ್ಯ ಕೂಡ ಅದೇ ಟೀಶರ್ಟ್‌ ಹಾಕ್ತೇವೆ. ಹಾಗಾದರೆ, ನಮ್ಮನ್ನೂ ಅವರು ಅರೆಸ್ಟ್‌ ಮಾಡ್ತಾರಾ? ಎಂದು ಪ್ರಶ್ನಿಸಿದರು.

ರಾಹುಲ್‌ ಯಾತ್ರೆ ಭರ್ಜರಿ ಆರಂಭ: ಕಾಂಗ್ರೆಸ್ಸಿಗರಿಂದ ಚುನಾವಣೆಗೆ ರಣಕಹಳೆ

ಈ ಯಾತ್ರೆ ಕೇವಲ ಕಾಂಗ್ರೆಸ್‌ ಕಾರ್ಯಕ್ರಮ ಅಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ಕೊಡುವ ಬಗ್ಗೆ ಚರ್ಚೆ ಮಾಡುತ್ತಾ ಸಾಗುತ್ತಿದ್ದೇವೆ. 40 ಪರ್ಸೆಂಟ್‌ ಕಮೀಷನ್‌ ಬಗ್ಗೆ, ಅವರ ಸಚಿವರು, ಶಾಸಕರು ಹೇಳಿದ್ದನ್ನೇ ಜನರ ಮುಂದೆ ಇಡುತ್ತಿದ್ದೇವೆ. ಇದೊಂದು ವರ್ಣ ರಂಜಿತ ನಡಿಗೆ. ಕನ್ನಡ ನಾಡಿನ ಸ್ವಾಭಿಮಾನದ ನಡಿಗೆ ಎಂದು ಅವರು ಹೇಳಿದರು. ಯಾತ್ರೆ ಕುರಿತಾದ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಭಾರತ್‌ ಐಕ್ಯತಾ ಯಾತ್ರೆಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ನಾವು ಚುನಾವಣೆಗೆ ರೆಡಿಯಾಗಿದ್ದೀವಿ. ಈ ಬಗ್ಗೆ ಬಿಜೆಪಿ ನಾಯಕರು ಯೋಚಿಸಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ