ಎಲ್ಲಾ ಕೈ ಶಾಸಕರನ್ನು ಬಿಜೆಪಿಗೆ ಕರೆಸಿಕೊಳ್ಳಿ : ಡಿ.ಕೆ ಶಿವಕುಮಾರ್

Kannadaprabha News   | Asianet News
Published : Oct 25, 2020, 07:00 AM IST
ಎಲ್ಲಾ ಕೈ ಶಾಸಕರನ್ನು ಬಿಜೆಪಿಗೆ ಕರೆಸಿಕೊಳ್ಳಿ : ಡಿ.ಕೆ ಶಿವಕುಮಾರ್

ಸಾರಾಂಶ

ಎಲ್ಲಾ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗಲಿ ಹೀಗೆಂದು ಡಿಕೆ ಶಿವಕುಮಾರ್ ಹೇಳಿದ್ದಾರೆ

ಬೆಂಗಳೂರು(ಅ.25):  ‘ಐವರು ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಐವರಷ್ಟೇ ಏಕೆ ಒಬ್ಬರನ್ನೂ ಬಿಡೋದು ಬೇಡ ಎಲ್ಲರನ್ನೂ ಕರೆದುಕೊಳ್ಳಲು ಹೇಳಿ’ ಎಂದು ಲೇವಡಿ ಮಾಡಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದ ವಿವಿಧ ವಾರ್ಡುಗಳಲ್ಲಿ ಶುಕ್ರವಾರ ತಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಪ್ರಚಾರ ಸಭೆ ನಡೆಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ನ ಐವರು ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರಲ್ಲಾ’ ಎಂಬ ಪ್ರಶ್ನೆಗೆ, ‘ಅವರಿಗೆ ಹೇಳಿ ತಡ ಮಾಡಲು ಹೋಗಬೇಡಿ. 

ಜಾತಿಗಳನ್ನ ಒಡೆದು ಆಳಿದ್ರೆ ಡಿಕೆಶಿ ಸಿಎಂ ಆಗ್ತಾರಾ..? ಸಖತ್ ಟಾಂಗ್ ಕೊಟ್ಟ ಮುನಿರತ್ನ ...

ಯಾರಾರ‍ಯರು ಬರುತ್ತಾರೋ ಅವರೆಲ್ಲರನ್ನೂ ಬೇಗ ಕರೆದುಕೊಂಡು ಹೋಗಲು ಹೇಳಿ. 5 ಜನ ಅಷ್ಟೇ ಅಲ್ಲ ಕಾಂಗ್ರೆಸ್‌ನಲ್ಲಿ ಒಬ್ಬರನ್ನೂ ಬಿಡುವುದು ಬೇಡ ಎಲ್ಲರನ್ನೂ ಕರೆದುಕೊಳ್ಳಲು ಹೇಳಿ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ನಮಗೆ ಅಂತಿಮ ಮಾರ್ಗದರ್ಶನ: ಸಚಿವ ದಿನೇಶ್ ಗುಂಡೂರಾವ್
ಆಳಂದ ಮತಗಳವಿಗೆ ಸುಭಾಷ್‌ ಗುತ್ತೇದಾರ್‌ ಸೂತ್ರಧಾರ್‌: ಎಸ್‌ಐಟಿ