ಬಿಜೆಪಿಗೆ ಡಿಕೆ ಶಿವಕುಮಾರ್ ಓಪನ್ ಚಾಲೆಂಜ್...!

Published : Aug 09, 2020, 05:49 PM ISTUpdated : Aug 09, 2020, 06:41 PM IST
ಬಿಜೆಪಿಗೆ ಡಿಕೆ ಶಿವಕುಮಾರ್ ಓಪನ್ ಚಾಲೆಂಜ್...!

ಸಾರಾಂಶ

ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ನರೆ ಅಧ್ಯಯನಕ್ಕೆ ಪ್ರವಾಸ ಕೈಗೊಂಡಿದ್ದು, ಇಂದು (ಭಾನುವಾರ) ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿದರು.

ಕೊಡಗು, (ಆ.09): ಅತಿ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಅಪಾರ ಪ್ರಮಾಣದ ಆಸ್ತಿ ಹಾಗೂ ಜೀವ ಹಾನಿ ಸಂಭವಿಸಿದೆ.  ಹೀಗಾಗಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ವರದಿ ಸಿದ್ಧಪಡಿಸಲು ಕಾಂಗ್ರೆಸ್ 5 ತಂಡಗಳನ್ನು ರಚಿಸಿದೆ. ಅಲ್ಲದೇ ಇಂದಿನಿಂದ ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ನರೆ ಅಧ್ಯಯನಕ್ಕೆ ಪ್ರವಾಸ ಕೈಗೊಂಡಿದ್ದು, ಇಂದು (ಭಾನುವಾರ) ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿದರು.

"

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನೆರೆ ಪರಿಸ್ಥಿತಿ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು, ಬಿಜೆಪಿ ಅಧಿಕಾರ ನಮಗೆ ಬಿಟ್ಟು ಕೊಡಲಿ. ಇಲ್ಲೇ ಮಲಗಿ ಪರಿಸ್ಥಿತಿ ನಿರ್ವಹಿಸುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದರು. 

ಪ್ರವಾಹ ನಿರ್ವಹಣೆಯಲ್ಲಿ ಸರ್ಕಾರ ವಿಫಲ, ನೆರೆ ಅಧ್ಯಯನಕ್ಕೆ ಕಾಂಗ್ರೆಸ್‌ನಿಂದ 4-5 ತಂಡ, ಡಿಕೆಶಿ

ಕೊಡಗಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಅದಕ್ಕಾಗಿ ಸರ್ಕಾರ ಪ್ರತ್ಯೇಕ ಪ್ಯಾಕೆಜ್ ನೀಡಬೇಕು ಎಂದು ಆಗ್ರಹಿಸಿರುವ ಡಿಕೆಶಿ,  ಮುಂದಿನ ಅಧಿವೇಶನದಲ್ಲಿ ಈ ಕುರಿತು ಚರ್ಚಿಸ್ತೇವೆ. ಅನೇಕ ಕಡೆ ತಡೆಗೋಡೆ,ರಸ್ತೆ ಆಗಬೇಕು. ಸಲಹೆ ಕೊಡೋದನ್ನ ಬಿಟ್ಟು ಅಧಿವೇಶನದಲ್ಲಿ 10 ಸಾವಿರ ಕೋಟಿ ಪ್ಯಾಕೆಜ್ ಕುರಿತು ಚರ್ಚಿಸ್ಬೇಕು. ಬೇರೆ ಕೆಲಸ ನಿಲ್ಲಿಸಿ ಶಾಶ್ವತ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಆಚಾರ್ ಮನೆಗೆ ಡಿಕೆಶಿ ಭೇಟಿ

ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಕಣ್ಮರೆಯಾಗಿರುವ ನಾರಾಯಣ ಆಚಾರ್ ಮನೆಗೆ ಡಿಕೆಶಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನವ ಹೇಳಿದರು.

ನಾರಾಯಣ ಆಚಾರ್ ಮನೆಯಿಂದ ಡಿಕೆಶಿ ಹೊರ ಬರ್ತಿದ್ದಂತೆ ಸುತ್ತುವರಿದ ಮಹಿಳೆಯರು. ನೆರೆಯಿಂದ ನಮಗೆ ಸಾಕಷ್ಟು ತೊಂದರೆಯಾಗ್ತಿದೆ. ಮನೆ ಕಟ್ಟಲು 5 ಲಕ್ಷ ಹಣ ಕೊಡ್ತೇವೆ ಅಂದಿದ್ರು ಇನ್ನೂ ಕೊಟ್ಟಿಲ್ಲ. ಕೆಲವರಿಗೆ ಮಾತ್ರ ಹಣ ಸಿಕ್ಕಿದೆ. ಬಾಡಿಗೆ ಕಟ್ಟಲು ಕೂಡ ಹಣ ನೀಡಿಲ್ಲ ಎಂದು ಡಿಕೆಶಿ ಮುಂದೆ ಮಹಿಳೆಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರಸಂಗ ನಡೆಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ
ವಾಕ್‌ ಸ್ವಾತಂತ್ರ್ಯ ಕಡಿವಾಣಕ್ಕೆ ದ್ವೇಷ ಭಾಷಣ ಮಸೂದೆ: ಆರ್.ಅಶೋಕ್ ಕಿಡಿ