
ಬೆಂಗಳೂರು (ಆ.16) : ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಮೇಲೆ ಘೋರ ದಾಳಿ ನಡೆದಿದ್ದರೂ ಈವರೆಗೂ ಶಾಸಕರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಸರ್ಕಾರ ರಕ್ಷಣೆ ನೀಡಿಲ್ಲ. ನಿರ್ಲಕ್ಷ್ಯ ಧೋರಣೆ ಬಿಟ್ಟು ಕೂಡಲೇ ಭದ್ರತೆ ಒದಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.
ಯಡಿಯೂರಪ್ಪ ಅವರಿಗೆ ಪತ್ರ ಬೆರೆದಿರುವ ಅವರು, ಶಾಸಕರಿಗೆ ಪ್ರಾಣಹಾನಿ ಮಾಡಲು ಪ್ರಯತ್ನಿಸಿ ಶಾಸಕರ ಮನೆಗೆ ಹಾಗೂ ಅವರ ಸಂಬಧಿಕರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಂಪೂರ್ಣ ಧ್ವಂಸ ಮಾಡಿದ್ದಾರೆ. ಇದರಿಂದ ಶಾಸಕರ ಇಡೀ ಕುಟುಂಬ ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ.
ಉರಿವ ಬೆಂಕಿಗೆ ಬಿಜೆಪಿಯಿಂದ ತುಪ್ಪ: ಡಿಕೆಶಿ ಕಿಡಿ .
‘ಹೀಗಿದ್ದರೂ ಶಾಸಕರ ಭದ್ರತೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ತೋರಿಸುತ್ತದೆ. ಒಬ್ಬ ಶಾಸಕರಿಗೆ ಸರ್ಕಾರ ಭದ್ರತೆ ಒದಗಿಸಲು ವಿಫಲವದರೆ ಇನ್ನು ಸಾಮಾನ್ಯ ಜನರನ್ನು ಈ ಸರ್ಕಾರ ರಕ್ಷಿಸಲು ಹೇಗೆ ಸಾಧ್ಯ?’ ಎಂದು ಪ್ರಶ್ನಿಸಿದರು.
‘ಇಂತಹ ಘೋರ ಕೃತ್ಯ ನಡೆದರೂ ಸರ್ಕಾರದ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ನೆಪ ಮಾತ್ರಕ್ಕೆ ಭೇಟಿ ನೀಡಿದ್ದಾರೆ. ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ರಕ್ಷಣೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಇದುವರೆಗೂ ಶಾಸಕರಿಗೆ ಹಾಗೂ ಅವರ ಕುಟುಂಬಕ್ಕೆ ಸರ್ಕಾರ ರಕ್ಷಣೆ ನೀಡಲು ಯಾವುದೇ ಕ್ರಮ ಕೈಗೊಂಡಿಲ್ಲ. ಸಚಿವರು ಕೇವಲ ಅನಗತ್ಯ ಹೇಳಿಕೆಗಳನ್ನು ನೀಡುತ್ತಾ ಓಡಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕುಟುಂಬ ಸದಸ್ಯರಿಗೆ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.