
ಮಂಗಳೂರು(ಜು. 20) ಸಿ.ಎಂ. ಬಿ.ಎಸ್.ಯಡಿಯೂರಪ್ಪ ಬದಲಾವಣೆ ವಿಚಾರಕ್ಕೆ ಕೆ.ಪಿ.ಸಿ.ಸಿ.ಕಾರ್ಯದರ್ಶಿ ಸಲೀಂ ಅಹ್ಮದ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಮುಖ್ಯಮಂತ್ರಿ ಮೇಲೆ ಹೈಕಮಾಂಡ್ ಗೆ ವಿಶ್ವಾಸವಿಲ್ಲ. ಅವರ ಪಕ್ಷದ ಮುಖಂಡರೇ ಬಿ.ಎಸ್.ವೈ.ಆಡಳಿತ ವಿಫಲ ಅಂತಾರೆ. ಅರುಣ್ ಸಿಂಗ್ ರಾಜ್ಯಕ್ಕೆ ಬಂದ್ರು ಏನು ಪ್ರಯೋಜನ ಇಲ್ಲ ಎಂದಿದ್ದಾರೆ.
ವೈರಲ್ ಆಡಿಯೋಕ್ಕೆ ಕಟೀಲ್ ರಾಜಕೀಯ ವೈರಿ ಪ್ರತಿಕ್ರಿಯೆ
ಮೂರು ದಿನ ಬೆಂಗಳೂರಿನಲ್ಲಿ ಕುಳಿತು ಮೀಟಿಂಗ್ ಮಾಡಿದ್ರು ಅಷ್ಟೆ. ಯಡಿಯೂರಪ್ಪ ಹೋಗಬೇಕಾ ಇರಬೇಕಾ ಎಂಬುದೇ ಚರ್ಚೆ. ಜನರ ಜೀವನದ ಬಗ್ಗೆ ಸ್ವಲ್ಪನೂ ಕಾಳಜಿ ಇಲ್ಲದ ಸರ್ಕಾರ ಇದು. ಇದೊಂದು ಅಯೋಗ್ಯರ ಸರ್ಕಾರ ಎಂದು ಟೀಕಿಸಿದರು.
ಮೊದಲು ರಾಜಕೀಯ ಸರ್ಕಸ್ ಮಾಡುವುದನ್ನ ನಿಲ್ಲಿಸಲಿ. ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನ ಮೊದಲು ಮಾಡಲಿ ಎಂದು ಸಲಹೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.