ಟಿಪ್ಪು ಬಗ್ಗೆ ಬಿಜೆಪಿ ನಾಯಕ ಗುಣಗಾನ: ಸತ್ಯ ಅರ್ಥವಾಯಿತೆ ಎಂದ ಕಾಂಗ್ರೆಸ್ ಮುಖಂಡ

Published : Aug 26, 2020, 10:16 PM ISTUpdated : Aug 27, 2020, 09:37 AM IST
ಟಿಪ್ಪು ಬಗ್ಗೆ ಬಿಜೆಪಿ ನಾಯಕ ಗುಣಗಾನ: ಸತ್ಯ ಅರ್ಥವಾಯಿತೆ ಎಂದ ಕಾಂಗ್ರೆಸ್ ಮುಖಂಡ

ಸಾರಾಂಶ

 ಬಿಜೆಪಿ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ಅವರು ಟಿಪ್ಪುವನ್ನು ಹಾಡಿ ಹೊಗಳಿದಕ್ಕೆ ರಾಜ್ಯದಲ್ಲಿ ಮತ್ತೆ ಟಿಪ್ಪು ಸುಲ್ತಾನ್ ಚರ್ಚೆ ಶುರುವಾಗಿದೆ

ಬೆಂಗಳೂರು, ಆ.26): ಟಿಪ್ಪು ಇತಿಹಾಸವನ್ನು ಶಾಲಾ ಪಠ್ಯದಿಂದ ಕೈಬಿಡುವ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಟಿಪ್ಪುವನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್‌ ವಿಶ್ವಾನಾಥ್ ಹಾಡಿ ಹೊಗಳಿದ್ದಾರೆ. ಇತ್ತ ಹಳ್ಳಿ ಹಕ್ಕಿ ವಿಶ್ವನಾಥ್ ಸತ್ಯವನ್ನೇ ಹೇಳಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳುವ ಮೂಲಕ ಧ್ವನಿಗೂಡಿಸಿದ್ದಾರೆ

"

ಟಿಪ್ಪು ಸುಲ್ತಾನ್ ಈ ನೆಲದ ಮಣ್ಣಿನ ಮಗ. ಅವರು ಯಾವುದೇ ಪಕ್ಷ, ಜಾತಿ ಧರ್ಮಕ್ಕೆ ಸೇರಿದವರಲ್ಲ. ಟಿಪ್ಪುವನ್ನು ಯಾವುದೇ ಪಕ್ಷಕ್ಕೆ ಜಾತಿ ಧರ್ಮಕ್ಕೆ ಸೇರಿಸಿ ಸಣ್ಣವನು ಮಾಡಬಾರದು ಎಂದಿದ್ದಾರೆ.

ಟಿಪ್ಪು ಸುಲ್ತಾನ್ ಬಗ್ಗೆ ಹಾಡಿ ಹೊಗಳಿ ಎಲ್ಲರ ಹುಬ್ಬೇರುವಂತೆ ಮಾಡಿದ ಬಿಜೆಪಿ ನಾಯಕ

ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರ್ ಖಂಡ್ರೆ ಟಿಪ್ಪು ಈ ನೆಲದ ಮಣ್ಣಿನ ಮಗ ಎಂದು ಹೇಳುವ ಮೂಲಕ ವಿಶ್ವನಾಥ್ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಕುರಿತ ಪಠ್ಯವನ್ನು ಪಠ್ಯ ಪುಸ್ತಕದಿಂದ ತೆಗೆಯುವ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿ ಪಕ್ಷದ ನಾಯಕ ಎಚ್.ವಿಶ್ವನಾಥ್ ಟಿಪ್ಪು ಈ ದೇಶ ಹಾಗೂ ಈ ನೆಲದ ಮಣ್ಣಿನ ಮಗ ಎನ್ನುತ್ತಾರೆ. ಬ್ರಿಟೀಷರ ವಿರುದ್ಧ ಹೋರಾಡಿದ ಹೋರಾಟಗಾರ ಎಂದು ಸರ್ಟಿಫಿಕೇಟ್ ಕೊಟ್ಟಿದ್ದು, ಬಿಜೆಪಿ ನಾಯಕರೇ ಈಗಲಾದರೂ ಸತ್ಯ ಅರ್ಥವಾಯಿತೆ? ಎಂದು ಟಾಂಗ್ ಕೊಟ್ಟರು.

 ಬಿಜೆಪಿಯವರು ಸತ್ಯ ಮರೆಮಾಚುವ ಕೆಲಸವನ್ನು ಮಾಡುತ್ತಿದ್ದಾರೆ. ಟಿಪ್ಪು ಒಬ್ಬ ದೇಶ ಭಕ್ತ , ವೀರ ಸೇನಾನಿ. ಟಿಪ್ಪು ನಿರ್ಮಾಣ ಮಾಡಿರುವ ದೇವಸ್ಥಾನ ಮತ್ತು ಕೋಟೆಗಳನ್ನುಗಳನ್ನು ನಾಶಮಾಡಲು ಆಗುತ್ತಾ? ಎಂದು ಪ್ರಶ್ನಿಸಿದ ಖಂಡ್ರೆ ಬಿಜೆಪಿ ಇತಿಹಾಸ ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ. ವಿಶ್ವನಾಥ್ ಸತ್ಯವನ್ನು ಹೇಳಿದ್ದಾರೆ ಹಾಗಾಗಿ ನಾನು ವಿಶ್ವನಾಥ್ ಹೇಳಿಕೆಯನ್ನು ಬೆಂಬಲಿಸುವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BSY: ಬಿಎಸ್‌ವೈ ನಮಗೆ ತಂದೆಯಷ್ಟೇ ಅಲ್ಲ, ಆದರ್ಶ ಗುರು - ಸಿಎಂ ಆಗುವ ಕನಸು ಹೊತ್ತು ರಾಜಕಾರಣ ಮಾಡಿದವರಲ್ಲ
5 States Assembly Election Results 2026: 'ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಲ ಬಿಚ್ಚಲು ಸಾಧ್ಯವಿಲ್ಲ' ತಮಿಳುನಾಡು, ಬಂಗಾಳ ಫಲಿತಾಂಶದ ಬಗ್ಗೆ ಬಿಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ!