
ಬಾಗಲಕೋಟೆ, (ಜ.07) : ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ, ಇನ್ನೂ ಬಹಳಷ್ಟು ಮಂದಿ ಇದ್ದಾರೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಇಂದು (ಗುರುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನದ ರೇಸ್ ನಲ್ಲಿದ್ದಾರೆ ನಿಜ. ಅವರ ಹಿಂದೆ ಇನ್ನೂ ಬಹಳಷ್ಟು ಜನ ಕ್ಯೂನಲ್ಲಿದ್ದಾರೆ. ಅವರು ಆದ ಮೇಲೆ ನಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇವೆ ಎಂದರು.
ಜೆಡಿಎಸ್ ಸೇರಲು ಕಾಂಗ್ರೆಸ್ ಹಿರಿಯ ನಾಯಕ ಉತ್ಸುಕ: ದೇವೇಗೌಡ್ರನ್ನ ಭೇಟಿಯಾಗಿ ಮಾತುಕತೆ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಅದಕ್ಕಾಗಿ ಸಂಘಟನೆ, ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದರು.
ಯಡಿಯೂರಪ್ಪ ಅವರು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೋ, ಇಲ್ಲವೋ ನಮಗೆ ಗೊತ್ತಿಲ್ಲ. ಅದು ನಮ್ಮ ಪಕ್ಷಕ್ಕೆ ಸಂಬಂಧಿಸಿದ ವಿಚಾರವಲ್ಲ. ಯಾರೇ ಸಿಎಂ ಇದ್ದರೂ ನಮ್ಮ ಸಂಘಟನೆ-ಹೋರಾಟ ಮುಂದುವರೆಯುತ್ತದೆ. ಮುಂದಿನ ಬಾರಿ ಅಧಿಕಾರಕ್ಕೆ ಬರಲು ಸಂಘಟನೆ ನಡೆಯುತ್ತದೆ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.