ಕಲ್ಯಾಣ ಕರ್ನಾಟಕದ 31 ಕ್ಷೇತ್ರದಲ್ಲಿ ಕೆಆರ್‌ಪಿಪಿ ಸ್ಪರ್ಧೆ: ಜನಾರ್ದನ ರೆಡ್ಡಿ

Published : Mar 10, 2023, 02:30 AM IST
ಕಲ್ಯಾಣ ಕರ್ನಾಟಕದ 31 ಕ್ಷೇತ್ರದಲ್ಲಿ ಕೆಆರ್‌ಪಿಪಿ ಸ್ಪರ್ಧೆ: ಜನಾರ್ದನ ರೆಡ್ಡಿ

ಸಾರಾಂಶ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮತದಾರರ ಒತ್ತಾಯದ ಮೇಲೆ ಪಕ್ಷವನ್ನು ಸ್ಥಾಪಿಸಿದ್ದು ಇಲ್ಲಿನ ಸರ್ವಾಂಗೀಣ ಅಭಿವೃದ್ಧಿ​ಗಾಗಿ ನಮ್ಮ ಪಕ್ಷವು ಶ್ರಮಿಸಲಿದೆ: ಗಾಲಿ ಜನಾರ್ದನ ರೆಡ್ಡಿ 

ಚಿತ್ತಾಪುರ(ಮಾ.10):  ಕಲ್ಯಾಣ ಕರ್ನಾಟಕದ ಆಯ್ದ 31 ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳು ಹಾಗೂ ಮತದಾರರ ಉತ್ತಮ ಬೆಂಬಲ ಸಿಗುತ್ತಿರುವ ಕ್ಷೇತ್ರಗಳಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ರಾಜ್ಯಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಪಟ್ಟಣದ ಕಂಬಳೇಶ್ವರ ಸಂಸ್ಥನಕ್ಕೆ ಭೇಟಿ ನೀಡಿದ ಕೆಅರ್‌ಪಿಪಿ ರಾಜ್ಯಾಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಶ್ರೀಗ​ಳಿಂದ ಸನ್ಮಾನ ಸ್ವೀಕ​ರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಹಿತದೃಷ್ಟಿಯಿಂದ ಪ್ರವಾಸವನ್ನು ಕೈಗೊಂಡಿದ್ದೇನೆ. ಇಲ್ಲಿನ ಪ್ರಸಿದ್ಧ ಸಂಸ್ಥಾನವಾಗಿರುವ ಕಂಬಳೇಶ್ವರ ಮಠಕ್ಕೆ ​ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮತದಾರರ ಒತ್ತಾಯದ ಮೇಲೆ ಪಕ್ಷವನ್ನು ಸ್ಥಾಪಿಸಿದ್ದು ಇಲ್ಲಿನ ಸರ್ವಾಂಗೀಣ ಅಭಿವೃದ್ಧಿ​ಗಾಗಿ ನಮ್ಮ ಪಕ್ಷವು ಶ್ರಮಿಸಲಿದೆ. ಮೊದಲ ಹಂತದಲ್ಲಿ ಬಳ್ಳಾರಿ, ಗಂಗಾವತಿ, ಕೊಪ್ಪಳ, ಸಿಂಧನೂರ, ಕನಕಗಿರಿ, ಹಿರಿಯೂರು, ಪಾವಗಡ, ನಾಗಠಾಣ, ಇಂಡಿ ಸೇರಿದಂತೆ 9 ವಿಧಾನ ಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದು ಇಂದು ಸೇಡಂ ಮತಕ್ಷೇತ್ರದ ಸಭ್ಯರ್ಥಿ ಘೋಷಣೆ ಮಾಡುತ್ತಿರುವುದಾಗಿ ಹೇಳಿದರು.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ಯಡಿಯೂರಪ್ಪ ವಿಶ್ವಾಸ

ಚಿತ್ತಾಪುರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ನಿಲ್ಲಿಸುವಿರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಸೂಕ್ತ ಅಭ್ಯರ್ಥಿ ಸಿಕ್ಕಲ್ಲಿ ಖಂಡಿತವಾಗಿ ಸ್ಪರ್ಧೆಗೆ ಇಳಿ​ಸು​ವು​ದಾಗಿ ಹೇಳಿದರು. ನಾನು ಎಂದೂ ಹೊಂದಾಣಿಕೆ ರಾಜಕೀಯ ಮಾಡಿಲ್ಲಾ ಮುಂದೆಯೂ ಮಾಡುವುದಿಲ್ಲಾ. ನಾನು ಎಂದು ಕಾಂಪ್ರಮೈಸ್‌ ರಾಜಕೀಯ ಮಾಡಲ್ಲಾ ನಾನು ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವುದಿಲ್ಲಾ ಅಥವಾ ಬೆಂಬಲ ನೀಡುವುದಿಲ್ಲಾ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿ. ಲಲ್ಲೇಶರೆಡ್ಡಿ, ಶಿವಲಿಂಗರೆಡ್ಡಿ, ಮಲ್ಲಿಕಾರ್ಜುನ ಮಂಗಲಗಿ, ಸಾಗರ ಚವ್ವಾಣ ಇದ್ದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಧ್ಯಕ್ಷರಾಗಿರುವ ಗಾಲಿ ಜನಾರ್ದನ ರೆಡ್ಡಿಯವರು ಮಠ, ಮಂದಿಗಳ ದೈವ ಭಕ್ತರಾಗಿದ್ದು ಅವರು ಚಿತ್ತಾಪುರಕ್ಕೆ ಬಂದಾಗ ನಮ್ಮ ಮಠಕ್ಕೆ ಬಂದು ಆರ್ಶೀವಾದ ಪಡೆದುಕೊಂಡು ಹೋಗಿದ್ದಾರೆ ಅಂತ ಚಿತ್ತಾಪುರ ಕಂಬಳೇಶ್ವರ ಮಠದ ಶಿವಾಚಾರ್ಯರು ಸೋಮಶೇಖರ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ