ಬಿಜೆಪಿ ಜನಸ್ಪಂದನಾ ಸಮಾವೇಶಕ್ಕೆ ಗೈರು: ಸ್ಪಷ್ಟ ಕಾರಣ ಕೊಟ್ಟ ಈಶ್ವರಪ್ಪ

Published : Sep 10, 2022, 04:31 PM IST
ಬಿಜೆಪಿ ಜನಸ್ಪಂದನಾ ಸಮಾವೇಶಕ್ಕೆ ಗೈರು: ಸ್ಪಷ್ಟ ಕಾರಣ ಕೊಟ್ಟ ಈಶ್ವರಪ್ಪ

ಸಾರಾಂಶ

ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಸಮಾವೇಶಕ್ಕೆ ಗೈರಾಗಿರುವುದಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕೊಟ್ಟ ಕಾರಣ ಹೀಗಿದೆ.  

ಶಿವಮೊಗ್ಗ, (ಸೆಪ್ಟೆಂಬರ್.10): ಕರ್ನಾಟಕ ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ ಜನಸ್ಪಂದನಾ ಸಮಾವೇಶಕ್ಕೆ ಮಾಜಿ ಸಚಿವ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಗೈರಾಗಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಇದಕ್ಕೆ ಸ್ವತಃ ಈಶ್ವರಪ್ಪನವರೇ ಕಾರಣಕೊಟ್ಟಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಇಂದು(ಸೆ,10) ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಇಂದಿನ ಸಮಾವೇಶದಲ್ಲಿ ಭಾಗವಹಿಸುತ್ತಿಲ್ಲ. ಕಾಲು ನೋವಿನಿಂದಾಗಿ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ ಜನಸ್ಪಂದನಾ ಸಮಾವೇಶದಲ್ಲಿ ಪಾಗ್ಲೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಜನಸ್ಪಂದನಾ ಸಮಾವೇಶದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದು ಬಿಜೆಪಿ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಜನಸ್ಪಂದನಾ ಸಮಾವೇಶ ರಾಜಕೀಯ ಪ್ರೇರಿತ ಅಲ್ಲ . ದಾವಣಗೆರೆಯಲ್ಲಿ 75 ಕೋಟಿ ರೂ. ಖರ್ಚು ಮಾಡಿ ಸಿದ್ಧರಾಮೋತ್ಸವ ಮಾಡಿದ್ದು ಅದು ರಾಜಕೀಯ ಪ್ರೇರಿತ. ಮೊದಲು ಅದರ ಲೆಕ್ಕ ಕೊಡಲಿ ಎಂದು ತಿರುಗೇಟು ನೀಡಿದರು.

ಬಿಜೆಪಿ ಜನಸ್ಪಂದನ ಸಮಾವೇಶ: ಕನ್ನಡದಲ್ಲೇ ಭಾಷಣ ಶುರುಮಾಡಿದ ಸ್ಮೃತಿ ಇರಾನಿ ಹೇಳಿದ್ದಿಷ್ಟು!

ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಬಗ್ಗೆ ಜನತೆಗೆ ತಿಳಿಸಲು ಜನಸ್ಪಂದನಾ ಸಮಾವೇಶ ನಡೆಸಲಾಗಿದೆ. ಸಿದ್ಧರಾಮಯ್ಯ ಅವರು ಸಮಾವೇಶ ಮಾಡಿದ ಕೂಡಲೇ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಅಂತಹ ನೂರಾರು ಸಮಾವೇಶಗಳನ್ನು ಬಿಜೆಪಿ ಮಾಡಿದೆ. ಇನ್ನುಮುಂದೆ ಕೂಡ ಸಮಾವೇಶ ಮಾಡಲಿದ್ದೇವೆ. ಪ್ರಧಾನಿಯವರ ಮಂಗಳೂರು ಸಮಾವೇಶ ಭಾರಿ ಯಶಸ್ವಿಯಾಗಿದೆ ಎಂದರು.

 ನಿನ್ನೆ(ಸೆ.09) ಶಿವಮೊಗ್ಗದ ಹಿಂದೂ ಮಹಾಸಭಾ ವಿಸರ್ಜನಾ ಮೆರವಣಿಗೆ ಹಿಂದೆಂದೂ ಕಾಣದಂತಹ ಅಪಾರ ಜನಸ್ತೋಮ ಭಾಗವಹಿಸುವುದರ ಮೂಲಕ ಯಶಸ್ವಿಯಾಗಿದೆ. ಶಾಂತಿಯುತವಾಗಿ ಮೆರವಣಿಗೆ ಪೂರ್ಣಗೊಂಡಿದ್ದು, ಯಾವುದೇ ಗೊಂದಲ ಆಗದಂತೆ ಅದ್ಧೂರಿಯಾಗಿ ಸಂಭ್ರಮದಿಂದ ಎಲ್ಲಾ ವಯಸ್ಸಿನವರೂ ಭಾಗವಹಿಸುವುದರ ಮೂಲಕ ದಾಖಲೆ ನಿರ್ಮಿಸಿದೆ ಎಂದು ಹೇಳಿದರು.

ಬಿಜೆಪಿ ಜನಸ್ಪಂದನ ಸಮಾವೇಶ: ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಉದ್ಯೋಗ ನೀಡುವುದಾಗಿ ಘೋಷಿಸಿದ ಸಿಎಂ

ನಿನ್ನೆಯ ವೈಭವ ಮತ್ತು ಅಷ್ಟು ದೊಡ್ಡ ಜನಸಂಖ್ಯೆ ಶಿವಮೊಗ್ಗದಲ್ಲೇ ಹುಟ್ಟಿ ಬೆಳೆದ ನಾನು ಇದುವರೆಗೂ ಕಂಡಿಲ್ಲ. ಶಿವಮೊಗ್ಗದಲ್ಲಿ ಇನ್ನುಮುಂದೆಯೂ ಕೂಡ ಎಲ್ಲಾ ಸಮಾರಂಭಗಳು ಶಾಂತಿಯುತವಾಗಿ ನಡೆಯಲಿವೆ ಎಂಬ ಆಶಯ ವ್ಯಕ್ತಪಡಿಸಿದರು.

ಕೆಲವು ಕಿಡಿಗೇಡಿಗಳ ಕೃತ್ಯಗಳಿಗೆ ಸರ್ಕಾರ ತಕ್ಕ ಪಾಠ ಕಲಿಸಿದೆ. ಹಿರಿಯರು ಕೂಡ ಅವರಿಗೆ ಬುದ್ಧಿ ಹೇಳಿದ್ದಾರೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್