'ನನಗೂ ಬಿಎಸ್‌ವೈಗೂ ಆಗಲ್ಲ ಎಂದೇ ಬರೆದುಕೊಳ್ಳಿ, ಸಿದ್ದರಾಮಯ್ಯಗೆ ಪದ್ಮಶ್ರೀ ಕೊಡಿ'

Published : Apr 07, 2021, 03:08 PM ISTUpdated : Apr 07, 2021, 03:17 PM IST
'ನನಗೂ ಬಿಎಸ್‌ವೈಗೂ ಆಗಲ್ಲ ಎಂದೇ ಬರೆದುಕೊಳ್ಳಿ, ಸಿದ್ದರಾಮಯ್ಯಗೆ ಪದ್ಮಶ್ರೀ ಕೊಡಿ'

ಸಾರಾಂಶ

ಆಡಳಿತ ಪಕ್ಷ ಬಿಜೆಪಿಯ ಆಂತರಿಕ ಕಿತ್ತಾಟದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈ​ಶ್ವರಪ್ಪ ತಮ್ಮದೇ ಶೈಲಿಯಲ್ಲಿ ಮಾತನಾಡಿದ್ದಾರೆ.

ಬೆಂಗಳೂರು, (ಏ.07): ಕತ್ತು ಕೊಯ್ದರೂ ನಾನು ಪಕ್ಷದ ವಿರುದ್ಧ ಹೋಗುವುದಿಲ್ಲ. ನನ್ನ ಇಲಾಖೆಯ ಸಮಸ್ಯೆಯನ್ನ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೆ ಹಾಗೂ ರಾಷ್ಟ್ರೀಯ ನಾಯಕರ ಗಮನಕ್ಕೆ ತಂದಿದ್ದೆ. ಅದನ್ನು ದೂರು ಎಂದುಕೊಂಡಿದ್ದೇ ತಪ್ಪು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸಮಜಾಯಿಷಿ ಕೊಟ್ಟಿದ್ದಾರೆ.

ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ನೀಡುವುದಕ್ಕೂ, ಮಾಹಿತಿ ನೀಡುವುದಕ್ಕೂ ವ್ಯತ್ಯಾಸ ಇದೆ ಎನ್ನುವುದು ಪತ್ರಕರ್ತರಿಗಾದರೂ ಗೊತ್ತಾಗಲಿ. ಇಷ್ಟಕ್ಕೂ ನಮ್ಮ ನಾಯಕರ ಭೇಟಿಯಾಗಲು ಯಾರ ಅನುಮತಿ ಬೇಕು? ನಾನೂ- ಯಡಿಯೂರಪ್ಪ ದಿನಾ ಜಗಳ ಆಡ್ತೀವಿ ಅಂತ ಬೇಕಿದ್ದರೆ ಬರೆದುಕೊಳ್ಳಿ ಎನ್ನುವ ಮೂಲಕ ಆಂತರಿಕ ಕಲಹದ ಬಗ್ಗೆ ತೇಪೆ ಹಚ್ಚುವ ಪ್ರಯತ್ನ ಮಾಡಿದರು.

'ಈಶ್ವರಪ್ಪರಂತಹ ಹಿಂದುಳಿದ ವರ್ಗಗಳ ನಾಯಕರನ್ನು ಮುಗಿಸಲು ಯಡಿಯೂರಪ್ಪ ಸ್ಕೆಚ್'

ಸಿದ್ದರಾಮಯ್ಯಗೆ ಪದ್ಮಶ್ರೀ ಕೊಡಬೇಕು
ವಿಪಕ್ಷ ನಾಯಕ ಸಿದ್ದರಾಮಯ್ಯ ಕಟ್ಟುಕಥೆ ಹೇಳುತ್ತಿದ್ದಾರೆ. ಕಥೆ ಕಟ್ಟುವುದರಲ್ಲಿ ಅವರಿಗೆ ಪದ್ಮಶ್ರೀ ಕೊಡಬೇಕು. ಸಿದ್ದರಾಮಯ್ಯಗೆ ಬೇರೆ ಉದ್ಯೋಗ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಯಾವುದೇ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದಿರುವ ಅವರು ಯತ್ನಾಳ್ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿ, ಶಾಸಕ ಯತ್ನಾಳ್ ಪಕ್ಷದ ಚೌಕಟ್ಟಿನೊಳಗೇ ಇರಬೇಕು. ಯತ್ನಾಳ್ ಬಳಿ ದಾಖಲೆ ಇದ್ರೆ ಅದನ್ನು ನೀಡಿ ಮಾತಾಡಲಿ. ನಾನು ರಾಜಭವನಕ್ಕೆ ಹೋಗಿದ್ದರ ಅಂಶ ಸ್ಪಷ್ಟಪಡಿಸುತ್ತೇನೆ ಎಂದರು.

ನಾನು ಯಾರ ಬಗ್ಗೆಯೂ ದೂರು ಕೊಟ್ಟಿಲ್ಲ, ಕೊಡುವುದೂ ಇಲ್ಲ. ಬಿ.ಎಸ್‌.ಯಡಿಯೂರಪ್ಪ ನಮ್ಮ ನಾಯಕರು, ನಮ್ಮ ಮುಖ್ಯಮಂತ್ರಿಗಳು. ನಾನು ನಮ್ಮ ನಾಯಕರಿಗೆ ಪತ್ರ ಬರೆಯದೇ ದೇವೇಗೌಡರು, ಡಿ.ಕೆ.ಶಿವಕುಮಾರ್‌ಗೆ ದೂರು ಕೊಡ್ಲಾ? ಎಂದು ಪ್ರಶ್ನಿಸಿದರು. 

ಈಶ್ವರಪ್ಪ- ಯಡಿಯೂರಪ್ಪ ಅಸಮಾಧಾನ ಶಮನಕ್ಕೆ ಮುಂದಾದ ಹೈಕಮಾಂಡ್!

ಯಡಿಯೂರಪ್ಪ ಅವರೊಂದಿಗಿನ ಮನಸ್ತಾಪದ ಬಗ್ಗೆ ವಿಚಾರಿಸಿದಾಗ ಉತ್ತರಿಸಲಾಗದೇ ತಡಬಡಾಯಿಸಿದ ಈಶ್ವರಪ್ಪ, ನನಗೂ ಯಡಿಯೂರಪ್ಪಗೆ ಆಗಲ್ಲವೆಂದು ಬರೆದುಕೊಳ್ಳಿ. ನಾನು ಪದೇ ಪದೇ ಹೇಳುತ್ತೇನೆ ಇದನ್ನು ಇಲ್ಲಿಗೇ ಬಿಡಿ. ನಾನು ಆ ದೂರಿನ ಬಗ್ಗೆ ಮಾತನಾಡುವುದಕ್ಕೆ ಹೋಗಲ್ಲ. ಮತ್ತೆ ಮತ್ತೆ ನೀವು ಅದನ್ನೇ ಕೇಳಬೇಡಿ ಎಂದು ಮಾಧ್ಯಮದವರ ವಿರುದ್ಧವೇ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್