ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್‌ಗೆ ಈಶ್ವರಪ್ಪ ಬೆಂಬಲ

Published : May 21, 2024, 10:34 AM IST
ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್‌ಗೆ ಈಶ್ವರಪ್ಪ ಬೆಂಬಲ

ಸಾರಾಂಶ

ರಘುಪತಿ ಭಟ್‌ ಅವರನ್ನು ಮನವೊಲಿಸುವುದಕ್ಕೆ ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಅವರಿಗೆ ಮುಂದೆ ಬೇರೆ ಅವಕಾಶಗಳನ್ನು ನೀಡುವ ಭರವಸೆಯನ್ನು ನೀಡಿದ್ದರು. ಆದರೆ ವಿಧಾನ ಪರಿಷತ್ ಟಿಕೆಟ್ ನೀಡದೇ ಮಾತು ತಪ್ಪಿದ ವರಿಷ್ಟರ ಮೇಲೆ ಮುನಿಸಿಕೊಂಡಿರುವ ಭಟ್, ಯಾವುದೇ ಭರವಸೆಗಳಿಗೆ ಮನವೊಲಿಯದೇ, ಕ್ಷೇತ್ರದ ಐದೂ ಜಿಲ್ಲೆಗಳಿಗೆ ತೆರಳಿ ಚುನಾವಣಾ ಪ್ರಚಾರ ಮಾಡಿದ್ದಾರೆ. 

ಉಡುಪಿ(ಮೇ.21):  ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಬಂಡಾಯವಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರಿಗೆ ಲೋಸಕಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೆಂಬಲ ವ್ಯಕ್ತಪಡಿಸಿದ್ದಾರೆ. ಸೋಮವಾರ ನಾಮಪತ್ರ ಹಿಂತೆಗೆದುಕೊಳ್ಳುವ ದಿನವಾಗಿದ್ದು, ರಘುಪತಿ ಭಟ್ ನಾಮಪತ್ರ ಹಿಂತೆಗೆದುಕೊಳ್ಳದೇ ಬಿಜೆಪಿಗೆ ಸೆಡ್ಡು ಹೊಡೆದು ಕಣದಲ್ಲಿ ಉಳಿದುಕೊಂಡು, ಬಿಜೆಪಿಗೆ ನುಂಗಲಾರದ ತುತ್ತಾಗಿದ್ದಾರೆ.

ಅವರನ್ನು ಮನವೊಲಿಸುವುದಕ್ಕೆ ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಅವರಿಗೆ ಮುಂದೆ ಬೇರೆ ಅವಕಾಶಗಳನ್ನು ನೀಡುವ ಭರವಸೆಯನ್ನು ನೀಡಿದ್ದರು. ಆದರೆ ವಿಧಾನ ಪರಿಷತ್ ಟಿಕೆಟ್ ನೀಡದೇ ಮಾತು ತಪ್ಪಿದ ವರಿಷ್ಟರ ಮೇಲೆ ಮುನಿಸಿಕೊಂಡಿರುವ ಭಟ್, ಯಾವುದೇ ಭರವಸೆಗಳಿಗೆ ಮನವೊಲಿಯದೇ, ಕ್ಷೇತ್ರದ ಐದೂ ಜಿಲ್ಲೆಗಳಿಗೆ ತೆರಳಿ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದಾರೆ. ಸೋಮವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ತಮ್ಮ ಬೆಂಬಲಿಗರನ್ನು, ಪದವೀಧರ ಮತದಾರರನ್ನು ಭೇಟಿಯಾಗಿ ಮತಯಾಚಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಮತಯಾಚನೆ ನಡೆಸಲಿದ್ದಾರೆ.

ಕರಾವಳಿ ಬಿಜೆಪಿಗರ ಕಡೆಗಣನೆ ವಿರುದ್ಧ ನನ್ನ ಸ್ಪರ್ಧೆ: ರಘುಪತಿ ಭಟ್‌

ಈಶ್ವರಪ್ಪರಿಂದ ಬೆಂಬಲ

ಈ ನಡುವೆ ಶಿವಮೊಗ್ಗದಲ್ಲಿ ಈಶ್ವರಪ್ಪ ಅವರು ರಘುಪತಿ ಭಟ್ ಅವರ ಪದವೀಧರರ ಸಂಪರ್ಕ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ, ತಮ್ಮ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೊಯ್ಸಳ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಂ. ಶಂಕರ್, ಸದಸ್ಯರಾದ ಸೋಗಣ್ಣ ರಮೇಶ್, ಶಿವಮೊಗ್ಗ ನಗರಪಾಲಿಕೆ ಮಾಜಿ ಸದಸ್ಯ ವಿಶ್ವಾಸ್, ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ್ ಭಾಗವತ್, ಸ್ಥಳೀಯ ಹಿರಿಯರಾದ ದೇವದಾಸ್ ನಾಯಕ್, ತಾಲೂಕು ವಿಶ್ವಕರ್ಮ ಸಮಾಜದ ಪ್ರಮುಖ ಅ.ಮಾ. ಪ್ರಕಾಶ್, ತಾಲೂಕು ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ವೆಂಕಟೇಶ್ ರಾವ್ ಹಾಗೂ ಇತರ ಸಮಾಜಗಳ ಪ್ರಮುಖರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌