ಅರುಣ್‌ ಸಿಂಗ್‌ ರಾಜ್ಯ ಭೇಟಿ ನಂತರ ಎಲ್ಲ ಸಮಸ್ಯೆ ಪರಿಹಾರ: ಈಶ್ವರಪ್ಪ

Kannadaprabha News   | Asianet News
Published : Jun 14, 2021, 12:50 PM IST
ಅರುಣ್‌ ಸಿಂಗ್‌ ರಾಜ್ಯ ಭೇಟಿ ನಂತರ ಎಲ್ಲ ಸಮಸ್ಯೆ ಪರಿಹಾರ: ಈಶ್ವರಪ್ಪ

ಸಾರಾಂಶ

* ಜು.16 ಕ್ಕೆ ಕರ್ನಾಟಕಕ್ಕೆ ಆಗಮಿಸಲಿರುವ ಅರುಣ್‌ ಸಿಂಗ್‌ * ಹೇಳುವವರು, ಕೇಳುವವರು ಇದ್ದಾರೆ ಎನ್ನುವುದಕ್ಕೆ ಅರುಣ್‌ ಸಿಂಗ್‌ ರಾಜ್ಯಕ್ಕೆ ಬರುತ್ತಿರುವುದೇ ಸಾಕ್ಷಿ * ಶಾಸಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶ

ಶಿವಮೊಗ್ಗ(ಜೂ.14): ರಾಜ್ಯ ಬಿಜೆಪಿ ಪ್ರಭಾರ ಉಸ್ತುವಾರಿ ಅರುಣ್‌ ಸಿಂಗ್‌ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರ ಭೇಟಿ ನಂತರ ಪಕ್ಷದ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತವೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಅರುಣ್‌ ಸಿಂಗ್‌ ಅವರು ಜು.16, 17, 18ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಕ್ಯಾಬಿನೆಟ್‌ ಸಚಿವರು ಹಾಗೂ ಕೋರ್‌ ಕಮಿಟಿಯೊಂದಿಗೆ ಸಭೆ ನಡೆಸಲಿದ್ದಾರೆ. ಶಾಸಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶವಿದೆ. ಇದು ಬಿಜೆಪಿಯ ವಿಶೇಷ.

ಬಿಎಸ್‌ವೈ ಅವರೇ ಸಿಎಂ: 100% ವರಿಷ್ಠರ ಅಭಿಪ್ರಾಯ!

ಹೇಳುವವರು, ಕೇಳುವವರು ಇದ್ದಾರೆ ಎನ್ನುವುದಕ್ಕೆ ಅರುಣ್‌ ಸಿಂಗ್‌ ಅವರು ರಾಜ್ಯಕ್ಕೆ ಬರುತ್ತಿರುವುದೇ ಸಾಕ್ಷಿ. ಅರುಣ್‌ ಸಿಂಗ್‌ ಬರುತ್ತಿದ್ದಂತೆ ಬಿಜೆಪಿಯ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತವೆ. ಇದು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರ ನಂಬಿಕೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ