ಸೋತರು ಕೆಲ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಕನಸು: ಈಶ್ವರಪ್ಪ ಹೇಳಿದ್ಯಾರಿ?

Published : Jun 20, 2021, 02:47 PM IST
ಸೋತರು ಕೆಲ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಕನಸು: ಈಶ್ವರಪ್ಪ ಹೇಳಿದ್ಯಾರಿ?

ಸಾರಾಂಶ

* ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಚಿವ ಕೆಎಸ್ ಈಶ್ವರಪ್ಪ * ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ  * ಚುನಾವಣೆಯಲ್ಲಿ ಸೋತರು ಕೆಲ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿಯ ಕನಸು ಎಂದು ಈಶ್ವರಪ್ಪ

ಶಿವಮೊಗ್ಗ, (ಜೂನ್.20): ಕಾಂಗ್ರೆಸ್ ನಲ್ಲಿ ಎದ್ದಿರುವ ಮುಖ್ಯಮಂತ್ರಿ ಸ್ಥಾನದ ಚರ್ಚೆಗೆ ಸಚಿವ ಈಶ್ವರಪ್ಪ ಭರ್ಜರಿಯಾಗಿಯೇ ಟಾಂಗ್ ನೀಡಿದ್ದಾರೆ. 

ಇಂದು (ಭಾನುವಾರ) ಶಿವಮೊಗ್ಗದಲ್ಲಿಂದು ಮಾತಮಾಡಿ ಅವರು, ಚುನಾವಣೆಯಲ್ಲಿ ಸೋತರು ಕೆಲ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿಯ ಕನಸು ಹೋಗಿಲ್ಲವೆಂದು ಹೆಸರು ಹೇಳದೇ ಪರೋಕ್ಷವಾಗಿ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು. 

ಬಿಜೆಪಿ ಅಯ್ತು ಈಗ ಕಾಂಗ್ರೆಸ್‌ ಸರದಿ: 'ಕೈ' ಪಾಳಯದಲ್ಲಿ ‘ಸಿದ್ದು ಮುಂದಿನ ಸಿಎಂ’ ವಿವಾದ..! .

ಅವರು ಮೇಲ್ನೋಟಕ್ಕೆ ಡಿಕೆಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ಮುಖ್ಯಮಂತ್ರಿಗಳ ಸ್ಥಾನದ ನಡುವೆ ಪೈಪೋಟಿ ನಡೆಯುತ್ತಿದೆ.ನಾನು ಮುಖ್ಯಮಂತ್ರಿ ಎಂದು ಈ ಇಬ್ಬರು ನಾಯಕರು ಹೇಳುತ್ತಿಲ್ಲ. ಬದಲಿಗೆ ಯಾರೋ ಮೂರನೇ ವ್ಯಕ್ತಿಯ ಮೂಲಕ ಹೇಳಿಸಲಾಗುತ್ತಿದೆ ಎಂದರು.

ಜಮೀರ್ ಅಹ್ಮದ್ ಮೂಲಕ ಹೇಳಿಸಿ ಅದು ಅವರ ವೈಯುಕ್ತಿಕ ಅಭಿಪ್ರಾಯ ಎಂದು ಈ ನಾಯಕರು ಹೇಳಿಕೊಂಡು ಓಡಾಡುತ್ತಿದ್ದಾರೆ
ನಿಮ್ಮ ಅಭಿಪ್ರಾಯವೇನು ಎಂದು ಪ್ರಶ್ನಿಸಿದ ಸಚಿವ ಈಶ್ವರಪ್ಪ, ಚಾಮುಂಡೇಶ್ವರಿಯಲ್ಲಿ ನೀವು ಸೋತಿದ್ದೀರಿ. ಬಾದಾಮಿಯಲ್ಲಿ ಆಕಸ್ಮಿಕ ಗೆದ್ದಿದ್ದೀರಿ, ಈಗ ಚಾಮರಾಜನಗರದಲ್ಲಿ ಸ್ಪರ್ಧಿಸುವ ಮಾತನಾಡುತ್ತಿದ್ದೀರಿ. ನೀವು ಮೊದಲು ಶಾಸಕರಾಗಿ ಗೆಲ್ಲೋದನ್ನ ಕಲಿಯಿರಿ ಎಂದು ಹೇಳಿದರು.

ಲೋಕಸಭೆ, ವಿಧಾನಸಭೆ ಹಾಗೂ ಎಲ್ಲಾ ಚುನಾವಣೆಗಳಲ್ಲಿ ನೀವು ಸೋತಿದ್ದೀರಿ. ಆದರೂ ಸಿಎಂ ಆಗುವುದಾಗಿ ಕನಸು ಕಾಣುತ್ತೀದ್ದಿರಿ. ಮೊದಲು ಚುನಾವಣೆಯಲ್ಲಿ ಗೆದ್ದು ಬನ್ನಿ. ನಂತರ ಬಹುಮತ ಸಾಬೀತುಪಡಿಸಿ ಅಧಿಕಾರ ಹಿಡಿಯುವರಂತೆ ಎಂದು ಟಾಂಗ್ ಕೊಟ್ಟರು.

ಇನ್ನೂ ಎರಡು ವರ್ಷ ಬಿಜೆಪಿ ಅಧಿಕಾರದಲ್ಲಿರುತ್ತದೆ. ಸಣ್ಣಪುಟ್ಟ ಗೊಂದಲಗಳ ಬಿಜೆಪಿಯಲ್ಲಿತ್ತು‌, ಅದನ್ನ ಈಗ ನಿವಾರಿಸಲಾಗಿದೆ. ಮುಂದಿನ ಅಭಿವೃದ್ಧಿ ಮಾಡುವತ್ತ ಗಮನ ಹರಿಸಿ ಮತ್ತೆ ಪಕ್ಷವೇ ಎರಡನೇ ಬಾರಿಗೆ ಗೆದ್ದುಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!