
ಬೆಂಗಳೂರು, (ಫೆ.19): ಬೆಂಗಳೂರು ಹೊರವಲಯದ ಬಿಡದಿ ಬಳಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕಾರು ಅಪಘಾತಕ್ಕೀಡಾಗಿದೆ.
ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಚಿವರ ಇನೋವಾ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಸಚಿವರು ಸೇರಿದಂತೆ ಕಾರಿನಲ್ಲಿದ್ದ ಯಾರಿಗೂ ಏನು ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.
ರಸ್ತೆ ಸುರಕ್ಷತಾ ಜಾಗೃತಿ: ಬೆಂಗಳೂರಿನಲ್ಲಿ ಬೃಹತ್ ವಿಂಟೇಜ್ ಕಾರು ರ್ಯಾಲಿ!
ಸಚಿವರ ಕಾರು ಬಿಡದಿ ಬಳಿ ಕದಂಬ ಹೋಟೆಲ್ ಮುಂಭಾಗದ ಬಂಕ್ನಲ್ಲಿ ಇಂಧನ ಹಾಕಿಸಿಕೊಂಡು ತೆರಳುವಾಗ KSRTC ಬಸ್ ಡಿಕ್ಕಿ ಹೊಡೆದೆ.
KSRTC ಬಸ್ ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿತ್ತು. ಅಪಘಾತದಲ್ಲಿ ಕಾರಿನ ಒಂದು ಭಾಗ ಜಖಂಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.