ಆರ್‌ಎಸ್‌ಎಸ್ ಗೀತೆ ಹಾಡಿದ ಕೈ ಶಾಸಕ ಡಾ। ರಂಗನಾಥ್‌

Kannadaprabha News   | Kannada Prabha
Published : Aug 25, 2025, 06:31 AM IST
MLA Ranganath

ಸಾರಾಂಶ

ವಿಧಾನಸಭೆ ಅಧಿವೇಶನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿ ಎಲ್ಲರ ಗಮನ ಸೆಳೆದಿದ್ದ ಬೆನ್ನಲ್ಲೇ ಅವರ ಷಡ್ಡಕರೂ ಆಗಿರುವ ಕುಣಿಗಲ್‌ ಕಾಂಗ್ರೆಸ್‌ ಶಾಸಕ ಡಾ.ರಂಗನಾಥ್ ಕೂಡ ಅದೇ ಗೀತೆಯನ್ನು ಹಾಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕುಣಿಗಲ್ : ವಿಧಾನಸಭೆ ಅಧಿವೇಶನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿ ಎಲ್ಲರ ಗಮನ ಸೆಳೆದಿದ್ದ ಬೆನ್ನಲ್ಲೇ ಅವರ ಷಡ್ಡಕರೂ ಆಗಿರುವ ಕುಣಿಗಲ್‌ ಕಾಂಗ್ರೆಸ್‌ ಶಾಸಕ ಡಾ.ರಂಗನಾಥ್ ಕೂಡ ಅದೇ ಗೀತೆಯನ್ನು ಹಾಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪಟ್ಟಣದಲ್ಲಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಕೂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಒಡನಾಟ ಇತ್ತು. ಅದರ ವಿಚಾರ ನನಗೆ ಸದಾ ಮನವರಿಕೆ ಆಗಿದೆ. ಅವರು ಯಾವ ರೀತಿ ಶಾಖೆಗಳನ್ನು ಮಾಡುತ್ತಾರೆ. ಜನಗಳ ಜೊತೆ ಅವರ ಬಾಂಧವ್ಯ ಹೇಗಿದೆ ಎಂಬುದನ್ನು ನಾನು ಅರಿತಿದ್ದೇನೆ ಎಂದರು.

ಈ ವೇಳೆ ಆರ್‌ಎಸ್‌ಎಸ್ ಗೀತೆಯನ್ನು ಹಾಡಿರುವ ಡಿ.ಕೆ.ಶಿವಕುಮಾರ್ ಬಗ್ಗೆ ಸಂತಸ ವ್ಯಕ್ತಪಡಿಸಿದ ರಂಗನಾಥ್, ಕಾಂಗ್ರೆಸ್ ಶಾಸಕನಾದ ನನಗೂ ಹಾಡು ಬರುತ್ತದೆಂದು ‘ನಮಸ್ತೇ ಸದಾ ವತ್ಸಲೇ ಮಾತೃಭೂಮಿ. ತ್ವಯ ಹಿಂದೂ ಭೂಮಿ....’ ಎಂದು ಒಂದೇರೆಡು ಸಾಲು ಹಾಡಿದರು.

ಡಿಕೆ ಹಾಡಿರುವುದು ತಪ್ಪಲ್ಲ: ‘ನಮ್ಮ ಡಿಕೆ ಸಾಹೇಬರು ಆರ್‌ಎಸ್‌ಎಸ್ ಗೀತೆ ಹಾಡಿರುವುದರಲ್ಲಿ ಏನು ತಪ್ಪು ಕಾಣಿಸುತ್ತಿಲ್ಲ. ನಮ್ಮದು ಜಾತ್ಯತೀತ ಪಕ್ಷ ಎಲ್ಲಾ ಧರ್ಮದವರು ಮನುಷ್ಯರಂತೆ ಇಲ್ಲಿ ಒಟ್ಟಾಗಿ ಬದುಕುವುದು ನಮ್ಮ ಸಂಕಲ್ಪ’ ಎಂದರು.

ಬಿಜೆಪಿಯರೂ ಹೆಚ್ಚಾಗಿ ಬಲಪಂಥೀಯ ವಾದ ಮಂಡಿಸುತ್ತಾ ಧರ್ಮದಲ್ಲಿ ಹುಳುಕು ಮೂಡಿಸುವಂತಹ ಕೆಲಸ ಮಾಡುತ್ತಾರೆ. ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವುದು. ಇದು ಸರಿಯಲ್ಲ. ಅದಕ್ಕಾಗಿ ಕಾಂಗ್ರೆಸ್ ಎಲ್ಲರನ್ನೂ ಕೂಡ ಒಟ್ಟಾಗಿ ತೆಗೆದುಕೊಂಡು ಹೋಗುತ್ತದೆ ಎಂದು ಡಾ.ರಂಗನಾಥ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು