ದೆಹಲಿಯಲ್ಲಿ ಮಾತು: ಬಿಜೆಪಿ ಸೇರುವಂತೆ ಡಿಕೆ ಸುರೇಶ್‌ಗೆ ಆಹ್ವಾನ..!

Published : Mar 03, 2020, 05:32 PM IST
ದೆಹಲಿಯಲ್ಲಿ ಮಾತು: ಬಿಜೆಪಿ ಸೇರುವಂತೆ ಡಿಕೆ ಸುರೇಶ್‌ಗೆ ಆಹ್ವಾನ..!

ಸಾರಾಂಶ

ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದನಿಗೆ ಬಿಜೆಪಿ ಸೇರುವಂತೆ ಬಹಿರಂಗ ಆಹ್ವಾನ ಬಂದಿದೆ.  ಸಂಸತ್ ಭವನದಲ್ಲಿ ಇರುವಾಗಲೇ ಬಿಜೆಪಿ ಸೇರುವಂತೆ ಆಹ್ವಾನ ನೀಡಲಾಗಿದೆ.  ರಾಜ್ಯದ ಏಕೈಕ ಕಾಂಗ್ರೆಸ್ ಸಂಸದನಿಗೆ ಬಿಜೆಪಿ ಸೇರುವಂತೆ ಆಹ್ವಾನ ಕೊಟ್ಟಿದ್ಯಾರು? ಈ ಕೆಳಗಿನಂತಿದೆ ರಾಜಕೀಯ ವಿವರ.

ನವದೆಹಲಿ/ಬೆಂಗಳೂರು, (ಮಾ.03): ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್‌ಗೆ ಬಿಜೆಪಿ ಸೇರಲು ಆಹ್ವಾನ ನೀಡಲಾಗಿದೆ. ರಾಮನಗರ ಸಂಸದ ಡಿಕೆ ಸುರೇಶ್ ಅವರಿಗೆ ಲಡಾಖ್​ನ ಬಿಜೆಪಿ ಸಂಸದ ಜಮ್ಯಾಂಗ್​ ತ್ಸೆರಿಂಗ್ ನಂಗ್ಯಾಲ್ ಆಹ್ವಾನ ಕೊಟ್ಟಿದ್ದಾರೆ.

ಬಿಜೆಪಿ ಸೇರ್ಕೊಳ್ಳಿ ಎಂದು ಮ್ಯಾಂಗ್​ ತ್ಸೆರಿಂಗ್ ನಂಗ್ಯಾಲ್ ಚುಟುಕಾಗಿ ಕನ್ನಡದಲ್ಲೇ ಡಿ.ಕೆ.ಸುರೇಶ್ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ.  ಸಂಸತ್ ಅಧಿವೇಶನ ನಡೆಯುತ್ತಿರುವ ಕಾರಣ ಎಲ್ಲ ಸಂಸದರೂ ಸೇರಿದ್ದಾರೆ.

ಬೆಂಕಿ ಕೆಂಡವಾದ ಮಧು ಬಂಗಾರಪ್ಪ: HDK, HDD ವಿರುದ್ಧ ವಾಗ್ದಾಳಿ

ಈ ವೇಳೆ ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ ಅವರಿಂದ ಜಮ್ಯಾಂಗ್​ ತ್ಸೆರಿಂಗ್ ನಂಗ್ಯಾಲ್ ಕನ್ನಡ ಮಾತನಾಡುವುದು ಪ್ರಯತ್ನಿಸಿದ್ದರು. ಆ ವೇಳೆ ಡಿ.ಕೆ.ಸುರೇಶ್ ಬಂದಿದ್ದಾರೆ. 

ಆಗ ಜಮ್ಯಾಂಗ್ ಟ್ಸೆರಿಂಗ್ ನಂಗ್ಯಾಲ್ ಕನ್ನಡದಲ್ಲಿ 'ಬಿಜೆಪಿ ಸೇರಿಕೊಳ್ಳಿ' ಎಂದು ಹೇಳಿದ್ದಾರೆ. ಅವರು ಈ ವಿಷಯವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಇದೊಂದು ಫನ್ನಿ ಟ್ವೀಟ್ ಅಂತ ಭಾವಿಸಲಾಗಿದೆ.

ಶಾಸಕರಿಗೆ ವಿಪ್‌ ಜಾರಿಗೊಳಿಸಿದ ಕಾಂಗ್ರೆಸ್‌, ತೀವ್ರ ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ನಡೆ

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ. ಇವರು 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್