
ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಚರ್ಚೆಯ ಕುರಿತ ವಿಷಯ ಬೂದಿ ಮುಚ್ಚಿದ ಕೆಂಡದಂತಾಗಿದೆ. ಎರಡೂವರೆ ವರ್ಷಗಳ ನಂತರ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಖುರ್ಚಿ ಬಿಟ್ಟುಕೊಡುತ್ತೇವೆ ಎಂದಿದ್ದ ಸಿದ್ದರಾಮಯ್ಯನವರು ಈಗ ಉಲ್ಟಾ ಹೊಡೆದಿರುವುದು, ಹಾಗೂ ಆನಂತರ ಕೆಲವು ತಿಂಗಳುಗಳಿಂದ ರಾಜಕೀಯದಲ್ಲಿ ಆಗುತ್ತಿರುವ ಕೋಲಾಹಲಗಳು ತಿಳಿದ್ದದ್ದೇ. ಏನಿಲ್ಲ, ಏನಿಲ್ಲ ನಮ್ಮ ನಡುವೆ ಏನಿಲ್ಲ, ಎಲ್ಲವೂ ಚೆನ್ನಾಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳ ಮುಂದೆ ಹೇಳುತ್ತಾ ಬಂದಿದ್ದಾರೆ. ಆದರೆ ಅವರ ಅಭಿಮಾನಿಗಳು ಡಿಕೆಶಿ ಅವರು ಯಾವಾಗ ಸಿಎಂ ಆಗ್ತಾರೆ ಎಂದು ಕಾದು ಕುಳಿತಿದ್ದಾರೆ. ಆದರೆ ಈ ವಿಷ್ಯ ಬಂದಾಗೆಲಲ್ಲಾ ಕಾಂಗ್ರೆಸ್ಸಿಗರದ್ದು ಒಂದೇ ಉತ್ತರ, ಅದು ಹೈಕಮಾಂಡ್ ಎನ್ನುವುದು!
ಅದರ ನಡುವೆಯೇ ಇದೀಗ ಕುತೂಹಲದ ಘಟನೆಯೊಂದು ನಡೆದಿದೆ. ನಿನ್ನೆ ಅರ್ಥಾತ್ ಮೇ 15ರಂದು ಶಿವಕುಮಾರ್ ಅವರ ಹುಟ್ಟುಹಬ್ಬ. ಈ ದಿನದಂದು ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿರುವ ನಡುವೆಯೇ, ಒಂದು ದಿಢೀರ್ ಬೆಳವಣಿಗೆಯೂ ನಡೆದಿದೆ. ಅದೇನೆಂದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ (Mrinal Hebbalkar) ಅವರ ಅಭಿಮಾನಿಗಳು ಬೆಳಗಾವಿಯಲ್ಲಿ ಹಾಕಿದ್ದ ಬ್ಯಾನರ್ ಭಾರಿ ಸದ್ದು ಮಾಡುತ್ತಿದೆ. ಮೃಣಾಲ್ ಅವರೂ ಇರುವ ಈ ಬ್ಯಾನರ್ನಲ್ಲಿ ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆಸಲಾಗಿದೆ.
ಈ ಬಗ್ಗೆ ಪತ್ರಕರ್ತರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೇಳಿದ ಪ್ರಶ್ನೆಗೆ, ಕಾರ್ಯಕರ್ತರ ಅಭಿಮಾನ ತಡೆಯೋಕೆ ಸಾಧ್ಯವಿಲ್ಲ. ಅವರಿಗೆ ನಾವು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಏನೇ ಇದ್ದರೂ ಅವರೇ ನೋಡಿಕೊಳ್ಳುತ್ತಾರೆ. ಆದರೆ ಬ್ಯಾನರ್ ವಿಷ್ಯದಲ್ಲಿ ನಾನು ಏನೂ ಮಾಡಲು ಆಗುವುದಿಲ್ಲ. ಅದು ಅಭಿಮಾನಿಗಳು ಮಾಡಿದ್ದು, ಅದನ್ನು ತಡೆಯುವುದು ನಮ್ಮಿಂದ ಆಗುವುದಿಲ್ಲ ಎಂದು ಜಾಣ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಯಕರ್ತರು ಅಭಿಮಾನದಿಂದ ಬ್ಯಾನರ್ ಹಾಕುತ್ತಾರೆ. ಏನೇ ಇದ್ದರೂ ಕೂಡ ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹೇಳಿದ್ದಂತೆ ಕೇಳುತ್ತೇನೆ. ಸಚಿವ ಸಂಪುಟ ಇರಲಿ, ಸಚಿವ ಸಂಪುಟದ ಪುನರ್ ರಚನೆ ಇರಲಿ ಎಲ್ಲವೂ ಹೈಕಮಾಂಡ್ಗೆ ಬಿಡಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.