ಲಕ್ಷ್ಮಿ ಹೆಬ್ಬಾಳ್ಕರ್​ ಕಾರಿನ ಅಪಘಾತಕ್ಕೆ ಟ್ವಿಸ್ಟ್​: ನಾಯಿ ಅಡ್ಡ ಬಂದದ್ದು ಕಾರಣವಲ್ಲ! ನಿಜಕ್ಕೂ ಆಗಿದ್ದೇನು?

Published : Jan 15, 2025, 05:05 PM ISTUpdated : Jan 15, 2025, 05:29 PM IST
ಲಕ್ಷ್ಮಿ ಹೆಬ್ಬಾಳ್ಕರ್​ ಕಾರಿನ ಅಪಘಾತಕ್ಕೆ ಟ್ವಿಸ್ಟ್​: ನಾಯಿ ಅಡ್ಡ ಬಂದದ್ದು ಕಾರಣವಲ್ಲ! ನಿಜಕ್ಕೂ ಆಗಿದ್ದೇನು?

ಸಾರಾಂಶ

ಸಂಕ್ರಾಂತಿಯಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಚನ್ನರಾಜ್ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿಯಲ್ಲಿ ಅಪಘಾತಕ್ಕೀಡಾಯಿತು. ಇಬ್ಬರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊದಲು ನಾಯಿ ಅಡ್ಡಬಂದ ಕಾರಣ ಅಪಘಾತವೆಂದು ಹೇಳಲಾಗಿತ್ತು. ಆದರೆ ಚಾಲಕನ ಪ್ರಕಾರ, ಟ್ರಕ್‌ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪೊಲೀಸರು ಹಿಟ್ ಆ್ಯಂಡ್ ರನ್ ಪ್ರಕರಣವೆಂದು ತನಿಖೆ ನಡೆಸುತ್ತಿದ್ದಾರೆ.

ನಿನ್ನೆ ಜನವರಿ 14ರ ಸಂಕ್ರಾಂತಿಯಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಬೆಳಗಾವಿಯ ‌ಕಿತ್ತೂರು ಬಳಿ  ನಡೆದಿದ್ದು, ಘಟನೆಯಲ್ಲಿ ಲಕ್ಷ್ಮಿ  ಅವರ ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ. ಸದ್ಯ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಇವರನ್ನು ಡಿಸ್​ಚಾರ್ಜ್​ ಮಾಡುವುದಾಗಿ ವೈದ್ಯರು ಹೇಳಿದ್ದಾರೆ. ಗಾಯಾಳುಗಳಿಗೆ ಹಲವು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರಾಗಿರುವ ಡಾ.ರವಿ ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅವರಿಗೆ  ವಿಶ್ರಾಂತಿಯ ಅಗತ್ಯವಿದೆ. ಮೂರು ದಿನಗಳಲ್ಲಿ   ಡಿಸ್ಚಾರ್ಜ್‌ ಮಾಡಲಾಗುತ್ತದೆ ಎಂದಿದ್ದಾರೆ.  ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಆಸ್ಪತ್ರೆಗೆ ಬಂದಾಗ ಬಹಳ ಪೆಟ್ಟಾಗಿತ್ತು. 24 ಗಂಟೆಯಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದೆ. ಸಚಿವರಿಗೆ ಬೆನ್ನುಹುರಿ ಪೆಟ್ಟಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದಿದ್ದಾರೆ.

ಇದರ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಕಾರು ಅಪಘಾತಕ್ಕೆ ಸಂಭವಿಸಿದಂತೆ, ಹಲವಾರು ರೀತಿಯ ಊಹಾಪೋಹಗಳು ಬಂದಿವೆ. ಇಲ್ಲಿಯವರೆಗೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ನಾಯಿಯೊಂದು ಅಡ್ಡ ಬಂದಿದ್ದು, ಅದನ್ನು ತಪ್ಪಿಸುವ ಭರದಲ್ಲಿ, ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಕಾರು ನುಜ್ಜುಗುಜ್ಜಾಗಿದೆ ಎಂದೇ ಹೇಳಲಾಗಿತ್ತು. ಆದರೆ ಕಾರಿನ ಅಪಘಾತಕ್ಕೆ ನಾಯಿ ಕಾರಣವಲ್ಲ ಎನ್ನುವ ವಿಷಯವನ್ನು ಇದೀಗ ಕಾರನ್ನು ಚಾಲನೆ ಮಾಡುತ್ತಿರುವ ಚಾಲಕ ಶಿವಪ್ರಸಾದ್​ ಪೊಲೀಸರಿಗೆ ತಿಳಿಸಿದ್ದಾರೆ.

ಸಿ.ಟಿ.ರವಿ ಘಟನೆ ಬೆನ್ನಲ್ಲೇ ಜಾಲತಾಣದಲ್ಲಿ ಭಾರಿ ಹಲ್​ಚಲ್​ ಸೃಷ್ಟಿಸ್ತಿದೆ ಲಕ್ಷ್ಮೀ ಹೆಬ್ಬಾಳ್ಕರ್​ ಹಳೆಯ ವಿಡಿಯೋ!

ಬದಲಿಗೆ ಕಾರಿನ ಎಡಭಾಗದಿಂದ ಕಂಟೇನರ್​ ಟ್ರಕ್​ ವೇಗಾಗಿ ಬಂದಿತ್ತು.  ಕಾರಿಗೆ ಟ್ರಕ್ ತಾಗುತ್ತಿದ್ದುದರಿಂದ  ಅಪಘಾತ ತಪ್ಪಿಸಲು ಎಡಕ್ಕೆ ತೆಗೆದುಕೊಂಡಿದ್ದರಿಂದ  ಕಾರು ಸರ್ವೀಸ್ ರಸ್ತೆ ಬದಿ ಇರುವ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಶಿವಪ್ರಸಾದ್​ ಪೊಲೀಸರಲ್ಲಿ ದೂರಿದ್ದು, ಈ ಕುರಿತು ಎಫ್​ಐಆರ್​ ದಾಖಲು ಮಾಡಲಾಗಿದೆ. 

ಅದೇ ಇನ್ನೊಂದೆಡೆ, ಈ ಬಗ್ಗೆ ಬೆಳಗಾವಿ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರೂ ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ  ಕಂಟೇನರ್ ಟ್ರಕ್ ಪಾತ್ರವಿದೆ. ಕಂಟೇನರ್ ಟ್ರಕ್ ಪತ್ತೆಗೆ ಕೆಲಸ ಮಾಡಲಾಗುತ್ತಿದೆ.  ಇದು ಹಿಟ್ ಆ್ಯಂಡ್​ ರನ್​ ಪ್ರಕರಣ ಎಂದು ಮೇಲ್ನೋಟಕ್ಕೆ ತೋರುತ್ತಿದೆ. ಅಕ್ಸಿಡೆಂಟ್​ ಆದ ಬಳಿಕ, ಕಂಟೇನರ್ ಟ್ರಕ್ ಚಾಲಕ ನಿಂತು ಪರಾರಿಯಾಗಿದ್ದಾನೆ. ಈ ಸಮಯದಲ್ಲಿ  ಸಚಿವರ ಬೆಂಗಾವಲು ಪಡೆ ಕೂಡ ಇರಲಿಲ್ಲ ಎಂದಿದ್ದಾರೆ. ಎಲ್ಲಾ ನಿಟ್ಟಿನಲ್ಲಿಯೂ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇಬ್ಬರು ನಾಯಕಾರು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ರಸ್ತೆ ಮಾರ್ಗವಾಗಿ ಬೆಳಗಾವಿಯತ್ತ ಬರುತ್ತಿದ್ದರು. ಒಂದೇ ವಾಹನದಲ್ಲಿ ಸಚಿವೆ ಹೆಬ್ಬಾಳ್ಕರ್, ಸಹೋದರ ‌ಚನ್ನರಾಜ್ ಹಟ್ಟಿಹೊಳಿ ಅವರು ಬರುತ್ತಿದ್ದರು. ಆ ಸಮಯದಲ್ಲಿ ಅಪಘಾತ ಸಂಭವಿಸಿದೆ. ನಾಯಿಯೊಂದು ಕಾರಿಗೆ ದಿಢೀರ್ ಅಡ್ಡಲಾಗಿ ಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಮೊದಲು ಉಹಿಸಲಾಗಿತ್ತು. 

Lakshmi hebbalkar Interview: ಸಿಟಿ ರವಿಯನ್ನು ನಾನು ಕ್ಷಮಿಸಿದರೆ ನನ್ನನ್ನಾರೂ ಕ್ಷಮಿಸಲ್ಲ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌