
ಬೆಂಗಳೂರು, (ಅ.10): ರಮೇಶ್ ಜಾರಕಿಹೊಳಿ (Ramesh Jarkiholi) ರಾಸಲೀಲೆ ಸಿಡಿ ಕೇಸ್ನಲ್ಲಿ ಯುವತಿ ಪರ ವಕಾಲತ್ತು ವಹಿಸಿದ್ದ ವಕೀಲ (lawyer) ಕೆ.ಎನ್. ಜಗದೀಶ್ ಮತ್ತೆ ಸುದ್ದಿಯಲ್ಲಿದ್ದಾರೆ.
ಹೌದು...ರಮೇಶ್ ಜಾರಕಿಹೊಳಿ ಕೇಸ್ ಬಳಿಕ ವಕೀಲ್ ಸಾಬ್ ಎಂದು ಕರೆಸಿಕೊಳ್ಳುತ್ತಿರುವ ಕೆ.ಎನ್. ಜಗದೀಶ್ ಕುಮಾರ್ (KN Jagadesh) ಅವರು ಆಮ್ ಆದ್ಮಿ ಪಕ್ಷಕ್ಕೆ (Aam Aadmi Party) ಸೇರ್ಪಡೆಯಾಗಲಿದ್ದಾರೆ.
ಅಕ್ಟೋಬರ್ 11ರ ಸೋಮವಾರದಂದು ಮಧ್ಯಾಹ್ನ 1.00 ಗಂಟೆಗೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ (Bengaluru Press Club) ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಬಳಿಕ ಅಲ್ಲೇ ಸುದ್ದಿಗೋಷ್ಠಿ ನಡೆಸಲಿದ್ದಾರೆ.
SIT ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ, ಆರೋಪಿ ಪರ ನಿಂತಿದ್ದಾರೆ: ಯುವತಿ ಪರ ವಕೀಲ
ಈ ಬಗ್ಗೆ ಅವರೇ ಕೆ.ಎನ್. ಜಗದೀಶ್ ಅವರೇ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹಂಚಿಕೊಂಡಿದ್ದಾರೆ. ಅಲ್ಲದೇ ಅಕ್ಟೋಬರ್ 11ರ ಸೋಮವಾರದಂದು ಮಧ್ಯಾಹ್ನ 1.00 ಗಂಟೆಗೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಜಗದೀಶ್ ಮಹಾದೇವ್ ಅವರನ್ನು ಆಮ್ ಆದ್ಮಿ ಪಾರ್ಟಿಗೆ ಬರಮಾಡಿಕೊಳ್ಳಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಭ್ರಷ್ಟಾಚಾರ ಹಾಗೂ ಇತರೆ ವಿಚಾರದ ಕುರಿತು ಮಾತನಾಡುತ್ತಲೇ ಜನರ ಗಮನ ಸೆಳೆದಿರುವ ಜಗದೀಶ್, ಈಗ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಪರ ವಕಾಲತ್ತು ವಹಿಸಿದ್ದ ಜಗದೀಶ್ ಕುಮಾರ್ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದರು. ಅಲ್ಲದೇ ಬಿಜೆಪಿ ಮುಖಂಡರ ಕೆಂಗಣ್ಣಿಗೂ ಗುರಿಯಾಗಿದ್ದರು.
ಬಳಿಕ ಅದೇನಾಯ್ತೋ ಏನೋ ರಮೇಶ್ ಜಾರಕಿಹೊಳಿ ಸಿಡಿ ಕೇಸ್ನಿಂದ ಆಚೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಪ್ಪುಗಳನ್ನ ಪ್ರಶ್ನೆ ಮಾಡುತ್ತಲೇ ಬಹಳಷ್ಟು ಫಾಲೋವರ್ಸ್ ಹೊಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.