ಬೆಳಗಾವಿ ಬಿಜೆಪಿ ಭದ್ರಕೋಟೆಯಾಗಲಿ : ಬಿ.ವೈ.ವಿಜಯೇಂದ್ರ ಕರೆ

Published : Dec 15, 2023, 04:53 AM IST
ಬೆಳಗಾವಿ ಬಿಜೆಪಿ ಭದ್ರಕೋಟೆಯಾಗಲಿ : ಬಿ.ವೈ.ವಿಜಯೇಂದ್ರ ಕರೆ

ಸಾರಾಂಶ

 ಬೆಳಗಾವಿ ಭಾರತೀಯ ಜನತಾ ಪಾರ್ಟಿ ಭದ್ರಕೋಟೆ ಆಗಬೇಕು.‌ಚಿಕ್ಕೋಡಿ, ಬೆಳಗಾವಿ ಬಿಜೆಪಿಗೆ ಸುವರ್ಣಾ ಕ್ಷರಗಳಲ್ಲಿ ಬರೆದಿಡುವಂತಹ ಭದ್ರಬುನಾದಿ‌ ಹಾಕಬೇಕು ಎಂದು ವಿಜಯೇಂದ್ರ ಕರೆ ನೀಡಿದರು. ಇಲ್ಲಿನ ಸುಭಾಷ ನಗರದಲ್ಲಿ ಗುರುವಾರ ಬೆಳಗಾವಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಕಾರ್ಯಾಲಯ ಭೂಮಿ ಪೂಜೆಗೆಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ‌ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ (ಡಿ.15) :  ಬೆಳಗಾವಿ ಭಾರತೀಯ ಜನತಾ ಪಾರ್ಟಿ ಭದ್ರಕೋಟೆ ಆಗಬೇಕು.‌ಚಿಕ್ಕೋಡಿ, ಬೆಳಗಾವಿ ಬಿಜೆಪಿಗೆ ಸುವರ್ಣಾ ಕ್ಷರಗಳಲ್ಲಿ ಬರೆದಿಡುವಂತಹ ಭದ್ರಬುನಾದಿ‌ ಹಾಕಬೇಕು ಎಂದು ವಿಜಯೇಂದ್ರ ಕರೆ ನೀಡಿದರು. ಇಲ್ಲಿನ ಸುಭಾಷ ನಗರದಲ್ಲಿ ಗುರುವಾರ ಬೆಳಗಾವಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಕಾರ್ಯಾಲಯ ಭೂಮಿ ಪೂಜೆಗೆಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ‌ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮತಾನಾಡಿದ ವಿಜಯೇಂದ್ರ ಅವರು, ಬಹಳಷ್ಟು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ಕಾರ್ಯಾಲಯಕ್ಕೆ ಇಂದು ಶುಭ ಘಳಿಗೆಯಲ್ಲಿ ಪೂಜೆ ನೇರವೇರಿದೆ. ಪಕ್ಷದ ಚಟುವಟಿಕೆಗಳು ಆಗಬೇಕೆಂದು ಪಕ್ಷದ ಕಚೇರಿ ನಿರ್ಮಿಸಲಾಗಿದೆ. ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಕಾರ್ಯಾಲಯ ಆಗಬೇಕು ಎಂಬುದು‌ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಉದ್ದೇಶವಾಗಿದೆ. ಅಲ್ಲದೇ ಯಡಿಯೂರಪ್ಪ ಅವರಿಗೂ ಕಾರ್ಯಾಲಯ ಆಗಬೇಕೆಂದು ಕನಸು ಇತ್ತು ಎಂದರು.

ಭದ್ರಾವತಿ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ; ಬಿವೈ ವಿಜಯೇಂದ್ರ ಗರಂ

ಬೆಳಗಾವಿ ಜಿಲ್ಲೆ ಸಕ್ಕರೆ ನಾಡು, ಕುಂದಾನಗರಿ. ಉತ್ತರ ಕರ್ನಾಟಕ ರಾಜ್ಯದ ಹೆಬ್ಬಾಗಿಲು ಬೆಳಗಾವಿ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಚಿಕ್ಕೋಡಿ ಬೆಳಗಾವಿ ಹೆಬ್ಬಾಗಿಲು ಆಗಬೇಕು. ಬುಧವಾರ ನಡೆದ ಪ್ರತಿಭಟನೆ ಅಭೂತಪೂರ್ವ ಕಾರ್ಯಕ್ರಮ ಆಗಿದೆ. ಕಳೆದೊಂದು ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಜಿಲ್ಲೆಯ ಎಲ್ಲ‌ ನಾಯಕರು ಬಂದಿದ್ದರು. ರಾಜ್ಯದ ಸರ್ಕಾರದ ವಿರುದ್ಧ ಹೋರಾಟದ ಕಿಚ್ಚು ಹಚ್ಚಲು ಯಶಸ್ವಿಯಾಗಿದ್ದೇವೆ ಎಂದ ವಿಜಯೇಂದ್ರ ಕಾರ್ಯಾಲಯ ನಿರ್ಮಾಣಕ್ಕೆ ಸಂಜಯ ಪಾಟೀಲ ಅವರು 5 ಲಕ್ಷ ರೂ. ಕಾಣಿಕೆ ನೀಡಿದ್ದಾರೆ. ಈ ಕಟ್ಟಡದ ಹೊಣೆ ತಮ್ಮೆಲ್ಲರದ್ದು, ಬೆಳಗಾವಿಯಲ್ಲಿ ಬಿಜೆಪಿ ಬೆಳೆಯಲು ಜನಸಂಘ ಕಾಲದಿಂದ ಸಿ.ಎಂ.ಪಾಟೀಲ, ಅಪ್ಪಾಸಾಹೇಬ ಮುತಗೇಕರ್ ಅವರಂಥ ಅನೇಕ ಹಿರಿಯರ ‌ಶ್ರಮವಿದೆ. ಹಲವಾರು ದಶಕಗಳ ಅವರ ಹೋರಾಟ ಶ್ರಮದಿಂದ ಬಿಜೆಪಿ ಎತ್ತರಕ್ಕೆ ಬೆಳೆದಿದೆ ಎಂದರು.

ಮಣಿಕಂಠ ರಾಥೋಡ್, ವಿಜಯೇಂದ್ರ ವಿರುದ್ಧ ಮಾನನಷ್ಟ ಕೇಸ್‌ ಹಾಕುವೆ: ಪ್ರಿಯಾಂಕ್‌ ಖರ್ಗೆ

ಈ ಕಾರ್ಯಕ್ರಮದಲ್ಲಿ ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ, ವಿಠ್ಠಲ ಹಲಗೇಕರ್, ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ, ಅನಿಲ್ ಬೆನಕೆ, ಮಹಾಂತೇಶ ದೊಡ್ಡಗೌಡರ, ಮಹೇಶ ಕುಮಟಳ್ಳಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಸೇರಿ ಮತ್ತಿತರರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?