ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ, ಮಹಿಮ ಪಟೇಲ್

Published : Sep 06, 2024, 05:30 AM IST
ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ, ಮಹಿಮ ಪಟೇಲ್

ಸಾರಾಂಶ

ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ರಂತಹ ಕಾಲದಲ್ಲಿ ಸಣ್ಣ ತಪ್ಪುಗಳು ಕಂಡು ಬಂದರೂ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಿ, ತನಿಖೆಯನ್ನು ಎದುರಿಸುತ್ತಿದ್ದರು. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಇಂದಿನ ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ರೀತಿಯ ಮೌಲ್ಯಾಧಾರಿತ ರಾಜಕಾರಣದ ಹಾದಿಯಲ್ಲಿ ನಡೆಯಬೇಕು. ಮುಡಾ ಹಗರಣದಲ್ಲಿ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದ ಜೆಡಿಯು ರಾಜ್ಯಾಧ್ಯಕ್ಷ ಮಹಿಮ. ಜೆ. ಪಟೇಲ್ 

ತುಮಕೂರು(ಸೆ.06): ಮೌಲ್ಯಾಧಾರಿತ ರಾಜಕಾರಣ ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ, ಅದನ್ನು ನಾಡಿನೆಲ್ಲೆಡೆ ಪಸರಿಸುವಂತೆ ಮಾಡುವ ಉದ್ದೇಶದಿಂದ ಜೆಡಿಯು ಪಕ್ಷ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಚೇರಿಗಳನ್ನು ತೆರೆದು, ಪಕ್ಷದ ಸಂಘಟನೆಯ ಜೊತೆಗೆ, ಮೌಲ್ಯಾಧಾರಿತ ರಾಜಕಾರಣವನ್ನು ಪರಿಚಯಿಸಲಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮ. ಜೆ. ಪಟೇಲ್ ತಿಳಿಸಿದ್ದಾರೆ.

ನಗರದಲ್ಲಿ ಜೆಡಿಯು ಜಿಲ್ಲಾ ಕಚೇರಿ ಉದ್ಘಾಟಿಸಿ ಮಾತನಾಡಿದರು. ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ರಂತಹ ಕಾಲದಲ್ಲಿ ಸಣ್ಣ ತಪ್ಪುಗಳು ಕಂಡು ಬಂದರೂ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಿ, ತನಿಖೆಯನ್ನು ಎದುರಿಸುತ್ತಿದ್ದರು. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಇಂದಿನ ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ರೀತಿಯ ಮೌಲ್ಯಾಧಾರಿತ ರಾಜಕಾರಣದ ಹಾದಿಯಲ್ಲಿ ನಡೆಯಬೇಕು. ಮುಡಾ ಹಗರಣದಲ್ಲಿ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

ಅಭಿವೃದ್ಧಿ ಎಂದರೆ ಕೇವಲ ರಸ್ತೆಗಳು, ಕಟ್ಟಡಗಳ ನಿರ್ಮಾಣವಷ್ಟೇ ಅಲ್ಲ. ಉತ್ತಮ ಮಾನವ ಸಂಬಂಧಗಳನ್ನು ನಿರ್ಮಾಣ ಮಾಡುವುದು ಸಹ ಅಭಿವೃದ್ಧಿಯ ಭಾಗವಾಗಿದೆ. ಈ ಮೂಲಕ ಮನುಷ್ಯರ ನಡುವೆ ಸಹಕಾರ, ಸಹಬಾಳ್ವೆಯನ್ನು ರೂಢಿಸುವುದು ಸಹ ಒಳ್ಳೆಯ ಅಭಿವೃದ್ದಿಯಾಗಿದೆ. ಇದನ್ನು ಸ್ಥಾಪಿಸಬೇಕೆಂಬ ಉದ್ದೇಶದಿಂದ ಜೆಡಿಯು ರಾಜ್ಯದಾದ್ಯಂತ ಪರಿವರ್ತನೆಯ ಹಾದಿಯನ್ನು ತುಳಿಯಲು ಮುಂದಾಗಿದೆ. ಈಗಾಗಲೇ ದಾವಣಗೆರೆ, ಹುಬ್ಬಳಿಯಲ್ಲಿ ಕಚೇರಿಗಳಿದ್ದು, ತುಮಕೂರಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಚೇರಿ ತೆರೆಯುವ ಕೆಲಸ ಆರಂಭವಾಗಿದೆ. ಇದಕ್ಕೆ ಕರ್ನಾಟಕದ ಜನತೆ ಬೆಂಬಲ ನೀಡಬೇಕೆಂದು ಎಂದು ತಿಳಿಸಿದರು.

ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಸುರೇಶ್ ಮಾತನಾಡಿ, ಸಿದ್ದಗಂಗಾ ಮಠಕ್ಕೂ ರಾಮಕೃಷ್ಣ ಹೆಗಡೆ ಅವರಿಗೂ ಅವಿನಾಭಾವ ಸಂಬಂಧವಿತ್ತು. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಿಂದಲೇ ಜೆಡಿಯು ಕಚೇರಿ ತೆರೆಯಲಾಗಿದೆ. ೨೦೨೮ರ ಕರ್ನಾಟಕದ ಸರ್ಕಾರದ ಒಂದು ಭಾಗವಾಗಿ ಜೆಡಿಯು ಇರಬೇಕೆಂಬ ಉದ್ದೇಶದಿಂದಲೇ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿರುವುದಾಗಿ ತಿಳಿಸಿದರು.

ಮುಡಾದಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಸರ್ಕಾರ ಕೆಡವಲು ಬಿಜೆಪಿ ಷಡ್ಯಂತ್ರ : ಡಿಕೆ ಸುರೇಶ್

ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರಾಜಕೀಯ ನಿಂತ ನೀರಲ್ಲ. ಕರ್ನಾಟಕದಲ್ಲಿ ಕಾಲಚಕ್ರ ತಿರುಗುವ ಕಾಲ ಬಂದಿದೆ. ರಾಜ್ಯದಲ್ಲಿಯೂ ಜೆಡಿಯು ಪ್ರಬಲ ರಾಜಕೀಯ ಪಕ್ಷವಾಗಿ ಬೆಳೆಯುವ ಎಲ್ಲಾ ಲಕ್ಷಣಗಳು ಕಂಡಬರುತ್ತಿವೆ. ಪಕ್ಷದ ಕಾರ್ಯಕರ್ತರು ದೃತಿಗೆಡೆದೆ ಪಕ್ಷದ ಸಂಘಟನೆಯಲ್ಲಿ ತೊಡಗಿದರೆ ಮುಂದಿನ ದಿನಗಳಲ್ಲಿ ಅಧಿಕಾರ ಖಚಿತ ಎಂದರು.

ತುಮಕೂರು ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕೆ.ಜಿ.ಎಲ್.ರವಿ, ಯಶೋಧ ಆರ್.ಪಿ, ಕಲ್ಪನಾಗೌಡ, ವಕ್ತಾರ ರಮೇಶಗೌಡ, ರಾಜ್ಯ ಕಾರ್ಯದರ್ಶಿ ಕ್ರಾಂತಿಕಿಡಿಗೌಡ, ಮಹಿಳಾ ಘಟಕ ಉಪಾಧ್ಯಕ್ಷೆ ಶಕುಂತಲ ಶೆಟ್ಟಿ, ಶಾಂತಕುಮಾರಿ, ಮುಖಂಡರಾದ ಪರಮೇಶ್ವರಯ್ಯ, ಬಸವರಾಜು ಬ್ಯಾಂಕ್, ರಂಗನಾಥ ಕೆ.ಆರ್., ಪ್ರಮೋದ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ