ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ

Published : Mar 09, 2024, 12:20 PM IST
ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ

ಸಾರಾಂಶ

ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿ ಉಳಿವಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. 

ಹೊಳವನಹಳ್ಳಿ (ಮಾ.09): ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿ ಉಳಿವಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನರೇಂದ್ರ ಮೋದಿ ಮತ್ತೇ ಪ್ರಧಾನಿ ಆದರೆ ನಮ್ಮ ದೇಶವು ಅಭಿವೃದ್ಧಿಯ ಪಥದತ್ತ ಸಾಗಲಿದೆ. ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ನಾನು ಅವರ ಪರವಾಗಿ ಪ್ರಚಾರ ಮಾಡ್ತೀನಿ. ನನಗೇ ದೇಶದ ಭವಿಷ್ಯ ಮುಖ್ಯ ಅಷ್ಟೇ ಎಂದು ತುಮಕೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಸೋಮಣ್ಣ ತಿಳಿಸಿದರು.

ಭಕ್ತರ ಸಂಖ್ಯೆಯೇ ಸಾಕ್ಷಿ: ಮೈಸೂರಿನ ನಂಜನಗೂಡು ನಂಜುಂಡೇಶ್ವರ ದೇವಾಲಯ ರೀತಿಯಲ್ಲೇ ಗೆದ್ಮೇನಹಳ್ಳಿಯ ಶ್ರೀ ಹೊಳೆ ನಂಜುಂಡೇಶ್ವರ ದೇವಾಲಯ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಮಹಾಶಿವನಿಗೆ ಪ್ರಿಯವಾದ ಹಬ್ಬ ಮಹಾಶಿವರಾತ್ರಿ ದಿನದಂದು ಶ್ರೀಕ್ಷೇತ್ರದಲ್ಲಿ ನೆರೆದಿರುವ ಭಕ್ತರ ಸಂಖ್ಯೆಯೇ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದರು. ಶ್ರೀ ಹೊಳೆ ನಂಜುಂಡೇಶ್ವರ ಸ್ವಾಮಿಯ ಪವಿತ್ರ ಪುಣ್ಯಕ್ಷೇತ್ರವು ನಂಜನಗೂಡು ರೀತಿಯಲ್ಲಿ ಪ್ರಸಿದ್ಧಿ ಪಡೆಯಲಿದೆ. ದೇವರ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಆಗಮನ ನೋಡಿದರೇ ದೈವದ ನಿಜರೂಪ ಇಲ್ಲೇ ತಿಳಿಯುತ್ತದೆ. ಆಡಂಬರ ಇಲ್ಲದೇ ಪ್ರಾರ್ಥನೆ ಸಲ್ಲಿಸುವ ಭಕ್ತರಿಗೆ ಒಲಿಯುವ ಶ್ರೀ ಕ್ಷೇತ್ರಕ್ಕೆ ನೂರಾರು ವರ್ಷದ ಇತಿಹಾಸವಿದೆ ಎಂದರು.

ಸಿರಿಧಾನ್ಯ ಬೇಸಾಯಕ್ಕೆ ಉತ್ತೇಜಿಸಿ, ರೈತರಿಗೆ ಅನುಕೂಲ ಕಲ್ಪಿಸಿ: ಸಚಿವ ಚಲುವರಾಯಸ್ವಾಮಿ

ಹೊಳೇ ನಂಜುಂಡೇಶ್ವರ ದೇವಾಲಯದ ಪ್ರಧಾನ ಅರ್ಚಕ ಮಾತನಾಡಿ, ಮಹಾಶಿವರಾತ್ರಿ ಪ್ರಯುಕ್ತ ನಂಜುಂಡೇಶ್ವರ ಸ್ವಾಮಿ ವಿಶೇಷ ಹೂವಿನ ಅಲಂಕಾರ, ವಿಶೇಷಪೂಜೆ, ಹೂಮಹವನ, ಟ್ರಸ್ಟ್‌ನಿಂದ ಅನ್ನದಾಸೋಹ ಮತ್ತು ಭಕ್ತಾಧಿಗಳಿಂದ ಪಾನಕ ವಿತರಣೆ ನಡೆಯಲಿದೆ. ಪವಿತ್ರಪುಣ್ಯ ಶ್ರೀಕ್ಷೇತ್ರಕ್ಕೆ ನೂರಾರು ವರ್ಷದ ಇತಿಹಾಸವಿದೆ. ಸ್ವಾಮಿಯ ದರ್ಶನ ಪಡೆಯುವ ಭಕ್ತರಿಗೆ ಶುಭವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್. ಬಸವರಾಜು, ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು, ಕೊರಟಗೆರೆ ಬಿಜೆಪಿ ಮಂಡಲ ಅಧ್ಯಕ್ಷ ದರ್ಶನ್, ಮಾಜಿ ಅಧ್ಯಕ್ಷ ಪವನಕುಮಾರ್, ಬಿಜೆಪಿ ಮುಖಂಡ ಅನಿಲ್‌ಕುಮಾರ್, ಕೋಳಾಲ ಗ್ರಾಪಂ ಅಧ್ಯಕ್ಷ ಶ್ರೀನಿವಾಸಮೂರ್ತಿ, ಯುವಧ್ಯಕ್ಷ ಗುರುಧತ್, ಮುಖಂಡರಾದ ಶಿವಕುಮಾರ್, ಕೌಶಿಕ್, ಗಿರೀಶ್, ರಾಜೇಂದ್ರ, ರವಿಕುಮಾರ್, ಉಮೇಶ್, ಶಿವರುದ್ರಯ್ಯ, ದೇವರಾಜು ಸೇರಿದಂತೆ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್