ಬಳ್ಳಾರಿ ಜನತೆಗೆ ರಾಹುಲ್‌ ಗಾಂಧಿ ನೀಡಿದ್ದ ಭರವಸೆ ಮೊದಲು ಈಡೇರಿಸಲಿ: ಶ್ರೀರಾಮುಲು

Published : Apr 26, 2024, 08:03 AM IST
ಬಳ್ಳಾರಿ ಜನತೆಗೆ ರಾಹುಲ್‌ ಗಾಂಧಿ ನೀಡಿದ್ದ ಭರವಸೆ ಮೊದಲು ಈಡೇರಿಸಲಿ: ಶ್ರೀರಾಮುಲು

ಸಾರಾಂಶ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬಳ್ಳಾರಿಗೆ ಬಂದರೆ ನನ್ನದೇನೂ ಅಭ್ಯಂತರ ಇಲ್ಲ. ಆದರೆ, ಅವರು ಈ ಹಿಂದೆ ಬಳ್ಳಾರಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲಿ. ರಾಜ್ಯದಲ್ಲಿ ಅವರದೇ ಸರ್ಕಾರ ಬಂದ್ರೂ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಮಾಜಿ ಸಚಿವ, ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಹೇಳಿದರು. 

ಹೊಸಪೇಟೆ (ಏ.26): ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬಳ್ಳಾರಿಗೆ ಬಂದರೆ ನನ್ನದೇನೂ ಅಭ್ಯಂತರ ಇಲ್ಲ. ಆದರೆ, ಅವರು ಈ ಹಿಂದೆ ಬಳ್ಳಾರಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲಿ. ರಾಜ್ಯದಲ್ಲಿ ಅವರದೇ ಸರ್ಕಾರ ಬಂದ್ರೂ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಮಾಜಿ ಸಚಿವ, ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಹೇಳಿದರು. ನಗರದ ಚಿತ್ತವಾಡ್ಗಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಜೀನ್ಸ್ ಅಪೇರಲ್ ಪಾರ್ಕ್ ಪ್ರಾರಂಭ ಮಾಡುತ್ತೇವೆ ಎಂದು ರಾಹುಲ್‌ ಗಾಂಧಿ ಈ ಹಿಂದೆ ಭರವಸೆ ನೀಡಿದರು. 

ಆದರೆ, ಇನ್ನು ಪ್ರಾರಂಭ ಆಗಿಲ್ಲ. ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿಲ್ಲ. ನಾವು ₹100 ಕೋಟಿ ಹಣ ಇಟ್ಟಿದ್ದೇವು. ಆದರೆ, ಅವರು ಅದನ್ನು ಖರ್ಚು ಮಾಡಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿದೆ. ಸಮನಾಂತರ ಜಲಾಶಯದ ಡಿಪಿಆರ್‌ಗಾಗಿ ನಾವು ₹1000 ಕೋಟಿ ಮೀಸಲಿಟ್ಟಿದ್ದೆವು, ಅದು ಏನಾಯಿತು? ಅಂಜನಾದ್ರಿ ಬೆಟ್ಟಕ್ಕೆ ₹100 ಕೋಟಿ ಮೀಸಲಿಡಲಾಗಿತ್ತು. ಏನು ಮಾಡಿದ್ರಿ? ಕೆಕೆಆರ್‌ಡಿಬಿ ಅಭಿವೃದ್ಧಿ ನಿಗಮದ ಹಣ ಏನಾಯ್ತು? ಎಸ್ಸಿ-ಎಸ್ಟಿಗೆ ಮೀಸಲಿಟ್ಟಿದ್ದ ₹11 ಸಾವಿರ ಕೋಟಿ ಏನಾಯ್ತು? ಈ ಬಗ್ಗೆ ನಮಗೆ ಉತ್ತರ ಕೊಡಬೇಕು ಎಂದರು.

ಕರ್ನಾಟಕ Election 2024 Live: ದಕ್ಷಿಣದ 14 ಜಿಲ್ಲೆಗಳಿಗೆ ಇಂದು ಮತದಾನ

ನಾನು ಪಿಎಗಳ ಕೋಟೆ ಕಟ್ಟಿಕೊಂಡಿಲ್ಲ: ನಾನು ಪಿಎಗಳ ಕೋಟೆ ಕಟ್ಟಿಕೊಂಡಿಲ್ಲ. ಕಳೆದ 35 ವರ್ಷಗಳಿಂದ ರಾಜಕೀಯದಲ್ಲಿರುವೆ. ಜನರ ಸೇವೆ ಮಾಡುತ್ತಾ ಬಂದಿರುವೆ. ಸೋಲುವ ಭೀತಿಯಿಂದ ಹತಾಶರಾಗಿ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ನಾನು ಒಳ್ಳೆಯ ಮನುಷ್ಯ. ನನ್ನ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಒಳ್ಳೆಯ ಮನುಷ್ಯರ ಮೇಲೆ ಆರೋಪಗಳು ಬರುವುದು ಸಹಜ ಎಂದರು. ಪ್ರಧಾನಿ ಮೋದಿ ಏ.28ರಂದು ಹೊಸಪೇಟೆಯಲ್ಲಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಈ ಪ್ರಚಾರ ನಮಗೆ ಶಕ್ತಿ ನೀಡಲಿದೆ. ಈಗಾಗಲೇ ದೇಶಾದ್ಯಂತ ಮೋದಿ ಅಲೆ ಇದೆ. ಬಳ್ಳಾರಿ, ಕೊಪ್ಪಳ ಲೋಕಸಭೆ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ. ಇದರಲ್ಲಿ ಎರಡು ಮಾತಿಲ್ಲ ಎಂದರು. ಬಿಜೆಪಿ ಮುಖಂಡರಾದ ಸಿದ್ಧಾರ್ಥ ಸಿಂಗ್‌, ಅಯ್ಯಾಳಿ ತಿಮ್ಮಪ್ಪ ಮತ್ತಿತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!