ನೈತಿಕತೆ ಬಗ್ಗೆ ಹೇಳುವ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ: ಆರಗ ಜ್ಞಾನೇಂದ್ರ

Published : Sep 26, 2024, 11:09 AM IST
ನೈತಿಕತೆ ಬಗ್ಗೆ ಹೇಳುವ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ: ಆರಗ ಜ್ಞಾನೇಂದ್ರ

ಸಾರಾಂಶ

ಸುಸಂಸ್ಕೃತ, ಭವ್ಯ ಪರಂಪರೆ ಇರುವ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಕೂರಬಾರದು. ಕಳಂಕ ಹೊತ್ತು ಅಧಿಕಾರ ನಡೆಸುವುದು ಸರಿಯಲ್ಲ. ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ. ವಿಚಾರಣೆ ನಡೆದು ಶುದ್ಧರಾಮಯ್ಯ ಆಗಿ ಹೊರಬಂದು ಮತ್ತೆ ಬೇಕಾದರೆ ಸಿಎಂ ಸ್ಥಾನ ಅಲಂಕರಿಸಲಿ ಎಂದು ಸಲಹೆ ನೀಡಿದ ಮಾಚಿ ಗೃಹ ಸಚಿವ ಆರಗ ಜ್ಞಾನೇಂದ್ರ 

ಶಿವಮೊಗ್ಗ(ಸೆ.26):  ಸದಾ ನೈತಿಕತೆ ಪಾಠ ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ನೈತಿಕತೆ ಪ್ರದರ್ಶಿಸಲಿ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ. ಇನ್ನಾದರೂ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ ಎಂದು ಮಾಚಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. 

ಇಂದು(ಗುರುವಾರ) ಹೊಸನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಪ್ರಕರಣ ರಾಜ್ಯಪಾಲರ ಬಳಿ ಹೋಗಿ ವಿಚಾರಣೆ ಅನುಮತಿ ಕೊಡುವುದಕ್ಕಿಂತ ಮೊದಲೇ ರಾಜೀನಾಮೆ ನೀಡಿದಿದ್ದರೆ ಅವರ ಇಮೇಜ್ ಹೆಚ್ಚುತ್ತಿತ್ತು. ಆದರೆ ಈಗ ಅವರ ಇಮೇಜ್ ನೆಲಕಚ್ಚಿದೆ ಎಂದು ಟೀಕಿಸಿದರು.

ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ‌ ನೀಡಲಿ: ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ

ಸುಸಂಸ್ಕೃತ, ಭವ್ಯ ಪರಂಪರೆ ಇರುವ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಕೂರಬಾರದು. ಕಳಂಕ ಹೊತ್ತು ಅಧಿಕಾರ ನಡೆಸುವುದು ಸರಿಯಲ್ಲ. ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ. ವಿಚಾರಣೆ ನಡೆದು ಶುದ್ಧರಾಮಯ್ಯ ಆಗಿ ಹೊರಬಂದು ಮತ್ತೆ ಬೇಕಾದರೆ ಸಿಎಂ ಸ್ಥಾನ ಅಲಂಕರಿಸಲಿ ಎಂದು ಸಲಹೆ ನೀಡಿದ್ದಾರೆ. 

ಅಡಕೆ ದರ ಕುಸಿಯುತ್ತಿದೆ. ಅದಕ್ಕೆ ಹಲವು ಕಾರಣ ಇರಬಹುದು. ಅಲ್ಲದೇ ಚಾಲಿ ಅಡಕೆಗೆ ಕೆಮಿಕಲ್ ಬಳಸಿ ಕೃತಕ ಬಣ್ಣ ಹಾಕಿ ಮೋಸ ಮಾಡುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ